ಸರಕಾರ ಬೀಳಿಸುವ ಬಿಜೆಪಿ ಆಸೆ ಫಲಿಸದು – ಶರವಣ

July 2, 2019
8:24 PM

ಸುಬ್ರಹ್ಮಣ್ಯ: ಕಾಂಗ್ರೆಸ್ ಪಕ್ಷದ  ಎರಡು ಶಾಸಕರು ಸಲ್ಲಿಸಿದ ರಾಜೀನಾಮೆಯನ್ನು ಸ್ಪೀಕರ್ ಊರ್ಜಿತ ಮಾಡೋದಿಲ್ಲ. ರಾಜ್ಯ ಸರಕಾರ ಸುಭದ್ರವಾಗಿರುತ್ತದೆ. ಸರಕಾರ ಬೀಳಿಸುವ ಬಿಜೆಪಿ ಆಸೆ ಫಲಿಸದು  ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ಆಪ್ತ ಶರವಣ ಹೇಳಿದ್ದಾರೆ.

ಸುಬ್ರಹ್ಮಣ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಬ್ಬರು ಶಾಸಕರು ರಾಜೀನಾಮೆಯನ್ನು ಸಲ್ಲಿಸಬೇಕಾದ ನಿಯಮವನ್ನು ಪಾಲಿಸಿಲ್ಲ. ಈ ಕಾರಣಕ್ಕಾಗಿ ಸ್ಪೀಕರ್ ಇಬ್ಬರ ರಾಜೀನಾಮೆಯನ್ನು ಅಂಗೀಕರಿಸುವುದಿಲ್ಲ‌.ಇಬ್ಬರು ಶಾಸಕರನ್ನು ಮನವೊಲಿಸುವ ಕಾರ್ಯವನ್ನು ಕಾಂಗ್ರೆಸ್ ಮುಖಂಡರು ಮಾಡುತ್ತಿದ್ದಾರೆ ಎಂದ ಅವರು ಸರಕಾರ ಸುಭದ್ರವಾಗಿದ್ದು, ಐದು ವರ್ಷ ಯಾವುದೇ ಅಡ್ಡಿಯಿಲ್ಲದೆ ಪೂರೈಸುತ್ತದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು. ಕಾಂಗ್ರೆಸ್ ನಾಯಕರು ಅವರ ಶಾಸಕರನ್ನು ಏನು ಮಾಡಬೇಕು ಅನ್ನೋದನ್ನ ಮಾಡ್ತಾರೆ, ಜಡಿಎಸ್ ಶಾಸಕರು ದೇವೇಗೌಡರ ಸಂಪರ್ಕದಲ್ಲಿದ್ದಾರೆ ಎಂದ ಅವರು ಸರಕಾರ ಬೀಳಿಸಲು ಪ್ರಯತ್ನಿಸುತ್ತಿರುವ ಬಿಜೆಪಿ ತಂತ್ರ ಫಲಿಸುವುದಿಲ್ಲ. ಕುರ್ಚಿಯ ಆಸೆಗಾಗಿ ಬಿಜೆಪಿ ಪಕ್ಷದವರು ಜಪ ಮಾಡುತ್ತಿದ್ದು, ಅವರ ಆಸೆ ನೆರವೇರುವುದಿಲ್ಲ ಎಂದು ಅವರು ಬಿಜೆಪಿ ವಿರುದ್ಧ ಕಿಡಿ ಕಾರಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror