ಸರಣಿ ರಜೆಯಿಂದಾಗಿ ಕುಕ್ಕೆ ಕ್ಷೇತ್ರದಲ್ಲಿ ಭಕ್ತರ ಸಂದಣಿ

April 22, 2019
4:17 AM

ಸುಬ್ರಹ್ಮಣ್ಯ: ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರಣಿ ರಜೆಯಿಂದಾಗಿ ಭಕ್ತರ ಸಂದಣಿ ಕಂಡು ಬಂತು. ಕಳೆದ ನಾಲ್ಕು ದಿನದಿಂದ ಭಕ್ತರ ಸಂಖ್ಯೆ ಕಡಿಮೆಯಿದ್ದರೂ ಶನಿವಾರ ಹಾಗೂ ಭಾನುವಾರ ಮಾತ್ರ ಅತ್ಯಧಿಕ ಸಂಖ್ಯೆಯಲ್ಲಿ ಶ್ರೀ ಕ್ಷೇತ್ರಕ್ಕೆ ಭಕ್ತರು ಆಗಮಿಸಿದ್ದರು.
ಬುಧವಾರ ಮಹಾವೀರ ಜಯಂತಿ ರಜೆ ಇದ್ದರೂ ಮತ್ತು ಗುರುವಾರ ಮತದಾನ ಇದ್ದುದರಿಂದ ಕ್ಷೇತ್ರದಲ್ಲಿ ಭಕ್ತರ ಸಂಖ್ಯೆ ವಿರಳವಾಗಿತ್ತು.ಶುಕ್ರವಾರ ಗುಡ್‍ಪ್ರೈಡೆ ರಜೆಯಾದರು ಭಕ್ತರ ಸಂಖ್ಯೆ ಹೆಚ್ಚಿರಲಿಲ್ಲ.ಆದರೆ ಶನಿವಾರ ಏಕಾಏಕಿ ಅತ್ಯಧಿಕ ಪ್ರಮಾಣದಲ್ಲಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿದರು. ಶನಿವಾರ ಮುಂಜಾನೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ, ಮಹಾಪೂಜೆ, ಆಶ್ಲೇಷ ಬಲಿ ಪೂಜೆ,
ನಾಗಪ್ರತಿಷ್ಠೆ, ಮುಂತಾದ ಸೇವೆಗಳನ್ನು ನೆರವೇರಿಸಿಕೊಂಡರು. ಹೆಚ್ಚಿನ ಸಂಖ್ಯೆಯ ಭಕ್ತರು ಬಂದ ಹಿನ್ನಲೆಯಲ್ಲಿ ದೇಗುಲದ ಒಳಾಂಗಣ, ಹೊರಾಂಗಣ ಹಾಗೂ ರಥಬೀದಿಗಳಲ್ಲಿ ಅಧಿಕ ಜನಸಂದಣಿಯಿತ್ತು. ದೇವಳದ ಹೊರಾಂಗಣದಲ್ಲಿ ಭಕ್ತಾಧಿಗಳು ಮಾರುದ್ದದ ನಾಲ್ಕು ಸರದಿ ಸಾಲಿನಲ್ಲಿ ತೆರಳಿ ದೇವರ ದರುಶನ ಪಡೆದರು. ಆದಿಸುಬ್ರಹ್ಮಣ್ಯ, ಕುಮಾರಧಾರ ಸ್ನಾನಘಟ್ಟದಲ್ಲಿಯು ಕೂಡಾ ಜನದಟ್ಟಣೆ ಕಂಡುಬಂದಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ತೆಂಗು-ಕೊಬ್ಬರಿ ಮಾರುಕಟ್ಟೆಗೆ ಭಾರೀ ಹೊಡೆತ – ಬೆಲೆ ಕುಸಿತ ತಾತ್ಕಾಲಿಕವೇ ಅಥವಾ ದೀರ್ಘಾವಧಿ ಸಂಕಷ್ಟವೇ?
June 11, 2026
2:38 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕೃಷಿ ಲಾಭದಾಯಕವೇ..? – ಮೂರು ವರ್ಷದಲ್ಲಿ ಕೆಜಿಗೆ ₹34.53 ವೆಚ್ಚ ಏರಿಕೆ – ನ್ಯಾಯಸಮ್ಮತ ಬೆಲೆಗಾಗಿ ರೈತರ ಒತ್ತಾಯ
June 10, 2026
10:30 PM
by: ಮಹೇಶ್ ಪುಚ್ಚಪ್ಪಾಡಿ
ಭಾರತದಲ್ಲಿ ಬಯೋ-ಕಾಂಪೋಸಿಟ್ ಕ್ರಾಂತಿ – ಅರಣ್ಯ ನಾಶವಿಲ್ಲದೇ ಕಟ್ಟಡ ನಿರ್ಮಾಣಕ್ಕೆ ಹೊಸ ದಾರಿ
June 9, 2026
11:38 AM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಕರಕುಶಲ ಗ್ರಾಮಗಳಿಗೆ ಹೊಸ ಜೀವ ತುಂಬುತ್ತಿರುವ ಪ್ರವಾಸೋದ್ಯಮ – ವಿಯೆಟ್ನಾಂ ಮಾದರಿ ಗಮನ ಸೆಳೆಯುತ್ತಿದೆ
May 31, 2026
6:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror