ಸರಣಿ ರಜೆಯಿಂದಾಗಿ ಕುಕ್ಕೆ ಕ್ಷೇತ್ರದಲ್ಲಿ ಭಕ್ತರ ಸಂದಣಿ

April 22, 2019
4:17 AM

ಸುಬ್ರಹ್ಮಣ್ಯ: ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರಣಿ ರಜೆಯಿಂದಾಗಿ ಭಕ್ತರ ಸಂದಣಿ ಕಂಡು ಬಂತು. ಕಳೆದ ನಾಲ್ಕು ದಿನದಿಂದ ಭಕ್ತರ ಸಂಖ್ಯೆ ಕಡಿಮೆಯಿದ್ದರೂ ಶನಿವಾರ ಹಾಗೂ ಭಾನುವಾರ ಮಾತ್ರ ಅತ್ಯಧಿಕ ಸಂಖ್ಯೆಯಲ್ಲಿ ಶ್ರೀ ಕ್ಷೇತ್ರಕ್ಕೆ ಭಕ್ತರು ಆಗಮಿಸಿದ್ದರು.
ಬುಧವಾರ ಮಹಾವೀರ ಜಯಂತಿ ರಜೆ ಇದ್ದರೂ ಮತ್ತು ಗುರುವಾರ ಮತದಾನ ಇದ್ದುದರಿಂದ ಕ್ಷೇತ್ರದಲ್ಲಿ ಭಕ್ತರ ಸಂಖ್ಯೆ ವಿರಳವಾಗಿತ್ತು.ಶುಕ್ರವಾರ ಗುಡ್‍ಪ್ರೈಡೆ ರಜೆಯಾದರು ಭಕ್ತರ ಸಂಖ್ಯೆ ಹೆಚ್ಚಿರಲಿಲ್ಲ.ಆದರೆ ಶನಿವಾರ ಏಕಾಏಕಿ ಅತ್ಯಧಿಕ ಪ್ರಮಾಣದಲ್ಲಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿದರು. ಶನಿವಾರ ಮುಂಜಾನೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ, ಮಹಾಪೂಜೆ, ಆಶ್ಲೇಷ ಬಲಿ ಪೂಜೆ,
ನಾಗಪ್ರತಿಷ್ಠೆ, ಮುಂತಾದ ಸೇವೆಗಳನ್ನು ನೆರವೇರಿಸಿಕೊಂಡರು. ಹೆಚ್ಚಿನ ಸಂಖ್ಯೆಯ ಭಕ್ತರು ಬಂದ ಹಿನ್ನಲೆಯಲ್ಲಿ ದೇಗುಲದ ಒಳಾಂಗಣ, ಹೊರಾಂಗಣ ಹಾಗೂ ರಥಬೀದಿಗಳಲ್ಲಿ ಅಧಿಕ ಜನಸಂದಣಿಯಿತ್ತು. ದೇವಳದ ಹೊರಾಂಗಣದಲ್ಲಿ ಭಕ್ತಾಧಿಗಳು ಮಾರುದ್ದದ ನಾಲ್ಕು ಸರದಿ ಸಾಲಿನಲ್ಲಿ ತೆರಳಿ ದೇವರ ದರುಶನ ಪಡೆದರು. ಆದಿಸುಬ್ರಹ್ಮಣ್ಯ, ಕುಮಾರಧಾರ ಸ್ನಾನಘಟ್ಟದಲ್ಲಿಯು ಕೂಡಾ ಜನದಟ್ಟಣೆ ಕಂಡುಬಂದಿತ್ತು.

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಕಣ್ಣಿಗೆ ಬಟ್ಟೆ ಕಟ್ಟಿ 6 ನಿಮಿಷದಲ್ಲಿ 112 ವಸ್ತುಗಳನ್ನು ಗುರುತಿಸಿದ ಬಾಲಕಿ | ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ |
April 27, 2025
11:17 AM
by: The Rural Mirror ಸುದ್ದಿಜಾಲ
ಪ್ರಕೃತಿ ಸೌಂದರ್ಯ ಮತ್ತು ಧಾರ್ಮಿಕತೆ ಮೇಳೈಸಿದ ಸ್ಥಳ ನಾಕೂರುಗಯ | ಭಕ್ತಿ ಪ್ರಕೃತಿಗಳ ಸಂಗಮ
April 24, 2025
6:05 AM
by: ದ ರೂರಲ್ ಮಿರರ್.ಕಾಂ
ಬೆಳೆಗಾರರಿಂದ ಗ್ರಾಹಕರಿಗೆ ನೇರ ಮಾವು ಮಾರಾಟ | ಅಂಚೆ ಇಲಾಖೆಯಿಂದ 6 ವರ್ಷಗಳಿಂದ ಯಶಸ್ವಿ | ದೆಹಲಿಯವರೆಗೂ ಮಾವಿನಹಣ್ಣು ರವಾನೆ |
April 23, 2025
11:24 AM
by: ದ ರೂರಲ್ ಮಿರರ್.ಕಾಂ
ಪುತ್ತೂರು ಜಾತ್ರೆ ಎಂದರೆ “ನಮ್ಮ ಮನೆ ಉತ್ಸವ”
April 17, 2025
10:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror