ಸರಳಗೊಳಿಸುವ ಉದ್ದೇಶದಿಂದ ಹೊಸ ತೆರಿಗೆ ವ್ಯವಸ್ಥೆಯನ್ನು ಭಾರತದಲ್ಲಿ ಜಾರಿಗೆ ತರಲಾಯಿತು

September 7, 2019
4:00 PM

ಸುಳ್ಯ: ಅತ್ಯಂತ ಕ್ಲಿಷ್ಟವಾಗಿದ್ದ ತೆರಿಗೆ ವ್ಯವಸ್ಥೆಯನ್ನು  ಸರಳಗೊಳಿಸುವ ಉದ್ದೇಶಹೊಂದಿರುವ ಹೊಸ ತೆರಿಗೆ ವ್ಯವಸ್ಥೆಯನ್ನು ಭಾರತದಲ್ಲಿ ಜಾರಿಗೆ ತರಲಾಯಿತು ಮತ್ತು ಹಳೆಯ ವ್ಯವಸ್ಥೆಯಿಂದ ಹೊಸ  ತೆರಿಗೆ ವ್ಯವಸ್ಥೆಗೆ ಹೊಂದಿಕೊಳ್ಳಬೇಕಾದರೆ ಅದರ ಸ್ವರೂಪವನ್ನು ಅರ್ಥಮಾಡಿಕೊಳ್ಳುವುದು ಅತೀ ಅಗತ್ಯ  ಎಂದು ನೆಹರು ಪದವಿ ಕಾಲೇಜಿನ ವಾಣಿಜ್ಯ  ವಿಭಾಗದ ಉಪನ್ಯಾಸಕರಾದ  ಪ್ರೊ. ರುದ್ರಕುಮಾರ್   ಹೇಳಿದರು.

ಅವರು ಕಾಲೇಜಿನ  ವಾಣಿಜ್ಯ  ಸಂಘ ಆಯೋಜಿಸಿದ್ದ ಜಿ ಎಸ್ ಟಿ  ಕುರಿತಾದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.  ಹೊಸ ತೆರಿಗೆ ವ್ಯವಸ್ಥೆಯ ಚಿಂತನೆ ಯಾಕೆ ಬಂತು, ಅದನ್ನು ಯಾವ ರೀತಿಯಾಗಿ ಅಳವಡಿಸುವ ಪ್ರಯತ್ನಗಳು ನಡೆದವು ಮತ್ತು ಒಟ್ಟಾರೆಯಾಗಿ ಹೊಸ ತೆರಿಗೆ ವ್ಯವಸ್ಥೆ ಏನು ಎಂಬುದನ್ನು ಸವಿವರವಾಗಿ  ತಿಳಿಯಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯ ಅವರು ಮಾತನಾಡಿ  ಭವಿಷ್ಯದ ಉದ್ಯೋಗದ ಅವಕಾಶಗಳನ್ನು ಬಳಸಿಕೊಳ್ಳಬೇಕಾದರೆ ಸಮಯಕ್ಕೆ ಸರಿಯಾಗಿ ಆಗುಹೋಗುಗಳನ್ನು ತಿಳಿದುಕೊಳ್ಳುವುದು  ಅಗತ್ಯವಿದೆ ಎಂದರು.

ವೇದಿಕೆಯಲ್ಲಿ ಉಪನ್ಯಾಸಕರಾದ  ಸಾವಿತ್ರಿ ಮತ್ತು ಕು. ಹರ್ಷಿತಾ  ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಧನ್ಯತಾ ಅತಿಥಿಗಳನ್ನು ಪರಿಚಯಿಸಿ, ವಿಸ್ಮಿತ ಸ್ವಾಗತಿಸಿ, ವಿದ್ಯಾರ್ಥಿ ಮೋಕ್ಷಿತ್ ವಂದಿಸಿದರು. ಆಕಾಂಕ್ಷ ಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು
April 29, 2026
10:45 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ
April 29, 2026
10:05 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
April 28, 2026
2:11 PM
by: ಸಾಯಿಶೇಖರ್ ಕರಿಕಳ
ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ
April 27, 2026
9:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror