ಸರ್ಕಾರದ ರೈತ ವಿರೋಧಿ ನಿಲುವನ್ನು ಖಂಡಿಸಿ ಪ್ರತಿಭಟನೆ – ರೈತ ಸಂಘ

June 27, 2020
10:20 PM

ಸುಳ್ಯ: ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಕರ್ನಾಟಕ ಘಟಕದ ಕರೆಯ ಮೇರೆಗೆ ಭೂಸುಧಾರಣಾ ಕಾಯ್ದೆ, ವಿದ್ಯುತ್ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯಿದೆ ಹಾಗು ಬೀಜ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸಿ ರೈತಾಪಿ ಕೃಷಿ ಉಳಿವಿಗಾಗಿ ಪ್ರತಿ ತಾಲೂಕು ಮಟ್ಟದಲ್ಲಿ ಪ್ರತಿಭಟನಾ ಸಭೆ ನಡೆಸಿ ಸರ್ಕಾರದ ನಿಲುವನ್ನು ಖಂಡಿಸಲಾಗುವುದು.ಅದರ ಜೊತೆ ಜೂ.29 ರಂದು ಸುಳ್ಯ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಪ್ರತಿಭಟನಾ ಸಭೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಪದಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ತೀರ್ಥರಾಮ ನೆಡ್ಚಿಲು ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡಿ ಕೃಷಿಕರ ಭೂಮಿಯನ್ನು, ಮಾರುಕಟ್ಟೆ ವ್ಯವಸ್ಥೆಯನ್ನು ಕಾರ್ಪೊರೇಟ್ ಕಂಪೆನಿಗಳ ವಶಕ್ಕೆ ನೀಡುವ ಹುನ್ನಾರ ಅಡಗಿದೆ. ವಿದ್ಯುತ್ ಸರಬರಾಜು ವ್ಯವಸ್ಥೆಯನ್ನು ಖಾಸಗೀಯವರಿಗೆ ಒಪ್ಪಿಸಲು ತಿದ್ದುಪಡಿ ತರಲು ಹೊರಟಿದೆ. ಇದರಿಂದ ಕೃಷಿಕರಿಗೆ ದೊಡ್ಡ ಹೊಡೆತ ನೀಡಲಿದೆ. ಅಗತ್ಯ ವಸ್ತುಗಳ ಕಾಯ್ದೆಗೆ ತಿದ್ದುಪಡಿ ತಂದು ಕಾಳ ಸಂತೆ ಕೋರರು ಅಗತ್ಯ ವಸ್ತುಗಳನ್ನು ದಾಸ್ತಾನು ಹೊಂದಿ ಕೃತಕ ಅಭಾವ ಸೃಷ್ಠಿಸುವ ಸಾಧ್ಯತೆ ಇದೆ. ಕಾರ್ಮಿಕರ ಕಾನೂನುಗಳನ್ನು ತಡೆ ಹಿಡಿದು ಕಾರ್ಮಿಕರ ಹಕ್ಕನ್ನು ಕೇಂದ್ರ ಸರ್ಕಾರ ಕಸಿದುಕೊಂಡಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು, ಮುಖಂಡರಾದ ತೀರ್ಥರಾಮ ಅರಂತೋಡು, ದಿವಾಕರ ಪೈ ಮಜಿಗುಂಡಿ, ಕಾರ್ಮಿಕ ಮುಖಂಡ ಕೆ.ಪಿ.ಜಾನಿ ಕಲ್ಲುಗುಂಡಿ ಮತ್ತಿತರರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…
June 4, 2026
10:30 PM
by: ಮಿರರ್‌ ಡೆಸ್ಕ್
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ
June 4, 2026
9:15 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ
June 3, 2026
1:54 PM
by: ಸಾಯಿಶೇಖರ್ ಕರಿಕಳ
ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ
June 3, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror