ಸವಣೂರು ಗ್ರಾ.ಪಂ.ನಿಂದ ಸಚಿವ ಈಶ್ವರಪ್ಪ ಅವರಿಗೆ ವಿವಿಧ ಬೇಡಿಕೆ ಈಡೇರಿಸಲು ಮನವಿ

November 9, 2019
11:56 AM

ಸವಣೂರು : ರಾಜ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ ಇಲಾಖೆಯ ಸಚಿವ ಕೆ.ಎಸ್ ಈಶ್ವರಪ್ಪ ಅವರಿಗೆ ಸವಣೂರು ಗ್ರಾ.ಪಂ.ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬಂಟ್ವಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಅವರು ಮನವಿ ಸಲ್ಲಿಸಿದರು.

ವಸತಿ ಯೋಜನೆಯ ವಿವಿಧ ಹಂತದ ಕಾಮಗಾರಿಯ ಮನೆಗಳಿಗೆ ಹಣ ಬಿಡುಗಡೆ ಮಾಡಲು, ವಸತಿ ಯೋಜನೆಯಲ್ಲಿ ಹೊಸ ಮನೆಗಳನ್ನು ಒದಗಿಸುವುದು ಮತ್ತು ಅನುದಾನ ಹೆಚ್ಚಳ ಮಾಡುವುದು, ಗ್ರಾ.ಪಂ.ರಸ್ತೆಗಳನ್ನು ಡಾಮರೀಕರಣಗೊಳಿಸಲು ಅನುದಾನ ನೀಡುವಂತೆ, ಸವಣೂರು ರೈಲ್ವೇ ಹಳಿ ದಾಟುವಲ್ಲಿ ಮೇಲಂತಸ್ತಿನ ರಸ್ತೆ ನಿರ್ಮಾಣ ಮಾಡುವುದು, ಬಿಪಿಎಲ್ ಪಡಿತರ ಚೀಟಿ ರದ್ದತಿಯ ಗೊಂದಲದ ಸಮಸ್ಯೆ ಪರಿಹರಿಸುವ ಕುರಿತು, ಗ್ರಾಮ ಪಂಚಾಯತ್‍ಗಳಿಗೆ ಅನುದಾನ ಹೆಚ್ಚಳ ಮಾಡುವಂತೆ, ಗ್ರಾ.ಪಂ.ಅಧ್ಯಕ್ಷರ/ಉಪಾಧ್ಯಕ್ಷರ/ಸದಸ್ಯರ ಗೌರವಧನ ಹೆಚ್ಚಳ ಮಾಡುವಂತೆ, ಸಾರ್ವಜನಿಕ ಕೆರೆಗಳ ಅಭಿವೃದ್ದಿಗೆ ಅನುದಾನ ನೀಡುವಂತೆ ಮನವಿಯಲ್ಲಿ ತಿಳಿಸಲಾಗಿದೆ.

ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ, ಸದಸ್ಯೆ ಸುಧಾ ನಾಗರಾಜ್ ನಿಡ್ವಣ್ಣಾಯ, ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ನಾರಾಯಣ ಬಟ್ಟೋಡಿ ಹಾಜರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು
August 18, 2026
7:33 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ
August 18, 2026
7:18 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ
August 18, 2026
7:10 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror