ಸವಣೂರು : ಚಾಪಳ್ಳ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದ್ ಉಲ್ ಫಿತ್ರ್

June 5, 2019
7:30 PM

ಸವಣೂರು: ಇಲ್ಲಿನ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದ್ ಉಲ್ ಫಿತ್ರ್ ಹಬ್ಬವನ್ನು ಬುಧವಾರ  ಸಡಗರದಿಂದ ಆಚರಿಸಲಾಯಿತು.

ಮಸೀದಿಯ ಮುದರ್ರಿಸ್ ಮುಹಮ್ಮದ್ ಅಶ್ರಫ್ ಫಾಝಿಲ್ ಬಾಖವಿರವರು ವಿಶೇಷ ಈದ್ ನಮಾಝಿನ ಮೊದಲು ಈದ್ ಸಂದೇಶ ನೀಡಿದ ಅವರು `ಕಳೆದ ಒಂದು ತಿಂಗಳಿನಿಂದ ರಂಝಾನ್ ಉಪವಾಸ ಆಚರಿಸುತ್ತಾ ನಾವು ಆತ್ಮ ಸಂಸ್ಕರಣೆಗೆ ಒಡ್ಡಿಕೊಂಡಿದ್ದೇವೆ.ಅನುಗ್ರಹೀತ ರಂಝಾನ್ ಮಾಸ ನಮ್ಮಿಂದ ವಿದಾಯ ಕೋರಿದೆ. ರಂಝಾನಿನಲ್ಲಿ ನಮ್ಮ ಜೀವನಕ್ರಮದಲ್ಲಿ ಯಾವ ರೀತಿಯ ಧನಾತ್ಮಕ ಬದಲಾವಣೆಗಳನ್ನು ಮಾಡಿಕೊಂಡಿದ್ದೇವೆಯೋ ಅದನ್ನು ಮುಂಬರುವ ದಿನಗಳಲ್ಲಿ ಅನುಸರಿಸುವ ಮೂಲಕ ಅಲ್ಲಾಹನ ಸಂಪ್ರೀತಿಗೆ ಪಾತ್ರರಾಗಲು ಪರಿಶ್ರಮಿಸೋಣ.ಶಾಂತಿ ಮತ್ತು ಸೌಹಾರ್ದತೆಯ ಪ್ರತೀಕವಾದ ಈದ್ ಉಲ್ ಫಿತ್ರ್ ನಾಡಿನೆಲ್ಲೆಡೆ ಹರ್ಷೋಲ್ಲಾಸವನ್ನು ಉಂಟುಮಾಡಲಿ’ ಎಂದು ಶುಭ ಹಾರೈಸಿದರು.
ವಿಶೇಷ ಈದ್ ನಮಾಝಿನ ಬಳಿಕ ಕುತುಬಾ ಪಾರಾಯಣ ನಡೆಯಿತು. ನಂತರ ಅಗಲಿದ ಗುರುಹಿರಿಯರ ಸದ್ಗತಿಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.
ನಮಾಝಿನ ಬಳಿಕ ಪರಸ್ಪರ ಆಲಂಗಿಸಿ ಶುಭಾಶಯ ಸಲ್ಲಿಸುವ ಮೂಲಕ ಈದ್ ಉಲ್ ಫಿತ್ರ್ ಸಂಭ್ರಮವನ್ನು ಹಂಚಿಕೊಳ್ಳಲಾಯಿತು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾನೂನು ಮತ್ತು ಸಂವಿದಾನದ ಅರಿವು ಕಾರ್ಯಾಗಾರ | ಶಿಕ್ಷಣ,ಕಾನೂನು,ಜಮೀನು ಸರ್ವರ ಹಕ್ಕು ಮತ್ತು ಕಡ್ಡಾಯವಾಗುವಂತೆ ಮಾಡಿದ್ದು ಅಂಬೇಡ್ಕರ್
January 28, 2025
9:16 PM
by: The Rural Mirror ಸುದ್ದಿಜಾಲ
ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಕೊಡದಿದ್ದರೆ ಏನು ಮಾಡುವುದು..?
January 15, 2025
6:35 AM
by: ದ ರೂರಲ್ ಮಿರರ್.ಕಾಂ
ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ.ಜಯಪ್ರಸಾದ ಆನೆಕಾರ
November 26, 2024
5:53 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಸ್ವಾತಂತ್ರ್ಯ ಹೋರಾಟಗಾರರು | ತಾಲೂಕು ಮಟ್ಟದ ಭಾಷಣ ಸ್ಪರ್ಧೆ
October 23, 2024
8:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror