ಸವಣೂರು ಬಸದಿ ರಸ್ತೆ ಅಭಿವೃದ್ದಿಗೆ ಅನುದಾನ ನೀಡುವಂತೆ ಶೋಭಾ ಕರಂದ್ಲಾಜೆಗೆ ಮನವಿ

September 10, 2019
1:00 PM

ಸವಣೂರು : ಇಲ್ಲಿನ ಪ್ರಸಿದ್ದ ಚಂದ್ರನಾಥ ಬಸದಿ ಹಾಗೂ ಪದ್ಮಾವತಿ ದೇವಿ ಸನ್ನಿಧಿಗೆ ತೆರಳುವ ರಸ್ತೆಯ ಅಭಿವೃದ್ದಿಗೆ ರಾಜ್ಯ ಸಭಾ ಸದಸ್ಯರ ಮೂಲಕ ಅನುದಾನ ದೊರಕಿಸಿಕೊಡುವಂತೆ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಸವಣೂರಿನ ನಿಯೋಗ ಬೆಂಗಳೂರಿನಲ್ಲಿ ಅವರನ್ನು ಬೇಟಿ ಮಾಡಿ ಮನವಿ ಸಲ್ಲಿಸಿದೆ.

Advertisement

ಹಲವು ವರುಷಗಳ ಇತಿಹಾಸ ಹೊಂದಿರುವ ಬಸದಿಯನ್ನು ಸಂದರ್ಶಿಸಲು ನೂರಾರು ಭಕ್ತರು ವಿವಿದೆಡೆಯಿಂದ ಆಗಮಿಸುತ್ತಿದ್ದಾರೆ. ಆದರೆ ಇಲ್ಲಿಗೆ ಮುಖ್ಯ ರಸ್ತೆಯಿಂದ ಸಂಪರ್ಕ ಕಲ್ಪಿಸುವ ರಸ್ತೆಯೂ ತೀರಾ ಹದೆಗೆಟ್ಟಿದ್ದು ಇದರಿಂದ ಸಮಸ್ಯೆಯಾಗಿದೆ ಈ ನಿಟ್ಟಿನಲ್ಲಿ ಅನುದಾನ ದೊರಕಿಸಿಕೊಡುವಂತೆ ಮನವಿ ಸಲ್ಲಿಸಿದರು.

ಬೆಂಗಳೂರಿಗೆ ತೆರಳಿದ ನಿಯೋಗದಲ್ಲಿ ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಸುರೇಶ್ ಕೆ ಪೆರಾಬೆ, ಸವಣೂರು ಗ್ರಾ.ಪಂ.ಸದಸ್ಯರಾದ ಪ್ರಕಾಶ್ ಕುದ್ಮನಮಜಲು, ಸತೀಶ್ ಅಂಗಡಿಮೂಲೆ, ಓಂಕಾರ ಸೇವಾ ಸಮಿತಿಯ ತೀರ್ಥರಾಮ ಕೆಡೆಂಜಿ, ಸವಣೂರು ಯುವಕ ಮಂಡಲದ ಕಾರ್ಯದರ್ಶಿ ಅಧ್ಯಕ್ಷ ಪ್ರವೀಣ್ ಚೆನ್ನಾವರ ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು
July 19, 2025
9:40 PM
by: ದ ರೂರಲ್ ಮಿರರ್.ಕಾಂ
ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ
July 19, 2025
9:22 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ
July 19, 2025
9:09 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ
July 19, 2025
9:03 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group