ಸಹೃದಯಿಗಳ ಸಹಕಾರದಲ್ಲಿ ನಿರ್ಮಾಣಗೊಂಡ “ಬೆಳಕು” ಹಸ್ತಾಂತರ

August 30, 2019
2:21 PM

ಸುಳ್ಯ: ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ನೇತೃತ್ವದಲ್ಲಿ ದಾನಿಗಳ ನೆರವಿನಿಂದ ಮತ್ತು ಯುವ ಸಂಘಟನೆಗಳ ಕಾರ್ಯಕರ್ತರ ಶ್ರಮದಾನದಿಂದ ಅಜ್ಜಾವರದಲ್ಲಿ ನಿರ್ಮಾಣಗೊಂಡ ನೂತನ ಮನೆ ‘ಬೆಳಕು‘ ಹಸ್ತಾಂತರ ಕಾರ್ಯಕ್ರಮ ಶುಕ್ರವಾರ ನಡೆಯಿತು. ಗ್ರಾಮದ ಅಡ್ಪಾಂಗಾಯ ಮಾವಿನಪಳ್ಳದಲ್ಲಿ ನಿರ್ಮಾಣಗೊಂಡ ಮನೆಯನ್ನು ರಾಮಣ್ಣ ನಾಯ್ಕ ದಂಪತಿಗಳಿಗೆ ಹಸ್ತಾಂತರಿಸಲಾಯಿತು.

ಜಿಲ್ಲಾ ಪಂಚಾಯತ್ ಸದಸ್ಯೆ ಪುಷ್ಪಾವತಿ ಬಾಳಿಲ ಮತ್ತು ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶುಭದಾ ಎಸ್‌.ರೈ ದೀಪ ಬೆಳಗಿಸಿದ ಬಳಿಕ ಮನೆಯ ‘ಬೆಳಕು‘ ನಾಮಫಲಕವನ್ನು ಅನಾವರಣಗೊಳಿಸಿದರು. ತಹಶೀಲ್ದಾರ್ ಎನ್.ಎ‌.ಕುಂಞಿ ಅಹಮ್ಮದ್ ಉದ್ಘಾಟಿಸಿದರು.

ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಮಾಜಿ ಸದಸ್ಯ ನವೀನ್ ಕುಮಾರ್ ಮೇನಾಲ, ಸುಳ್ಯ ನ.ಪಂ.ಸದಸ್ಯೆ ಶಿಲ್ಪಾ ಸುದೇವ್, ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ಡಾ.ಕೆ.ಜಿ.ಪುರುಷೋತ್ತಮ, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಹರ್ಷಿತಾ ಪುರುಷೋತ್ತಮ, ಪಿ.ಬಿ.ಸುಧಾಕರ ರೈ, ಕೆ.ಎಸ್.ಗೋಪಾಲಕೃಷ್ಣ ಕರೋಡಿ, ಹಸೈನಾರ್ ಹಾಜಿ ಗೋರಡ್ಕ, ಶ್ಯಾಂ ಅಡ್ಡಂತ್ತಡ್ಕ, ಲೋಕೇಶ್ ಗುಡ್ಡೆಮನೆ, ವಿನೋದ್ ಲಸ್ರಾದೋ ಮತ್ತಿತರರು ಉಪಸ್ಥಿತರಿದ್ದರು. ಮನೆ ನಿರ್ಮಾಣ ಕಾರ್ಯದಲ್ಲಿ ಕೈ ಜೋಡಿಸಿದ ಸಂಘಟನೆಗಳ ಕಾರ್ಯಕರ್ತರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.

ದಾನಿಗಳ ಸಹಕಾರದಲ್ಲಿ ಅಜ್ಜಾವರದಲ್ಲಿ ಮತ್ತೊಂದು ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಕುಂಞಿ ಅಹಮ್ಮದ್ ತಿಳಿಸಿದ್ದಾರೆ. ವಿಖ್ಯಾತ್ ಬಾರ್ಪಣೆ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ
ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror