ಸಾಲಮನ್ನಾ- ರೈತ ಸಂಘ ಪ್ರತಿಭಟನೆ; ಭರವಸೆಯ ಹಿನ್ನಲೆಯಲ್ಲಿ ಪ್ರತಿಭಟನೆ ಹಿಂದಕ್ಕೆ

October 31, 2019
9:54 PM

ಸುಳ್ಯ: ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಸುಳ್ಯ ತಾಲೂಕು ಘಟಕ ಹಾಗೂ ಅರಂತೋಡು ವಲಯ ಘಟಕ ವತಿಯಿಂದ ರೈತರ ಸಾಲ ಮನ್ನಾ ಸೌಲಭ್ಯ ವಿಳಂಬ ಖಂಡಿಸಿ ಅರಂತೋಡು ಸಹಕಾರಿ ಸಂಘದ ಎದುರು ಪ್ರತಿಭಟನೆ ನಡೆಸಲಾಯಿತು. ಸಹಕಾರಿ ಬ್ಯಾಂಕ್ ನ ಸುಳ್ಯ ವಲಯ ಮೇಲ್ವಿಚಾರಕರು ನೀಡಿದ ಭರವಸೆಗೆ ತೃಪ್ತರಾಗದೆ ಸಹಕಾರಿ ಸಂಘದ ಉಪನಿಬಂಧಕರು ಬಂದು ಸರಿಯಾದ ಉತ್ತರ ಕೊಡಬೇಕೆಂದು ಪಟ್ಟು ಹಿಡಿದು ಅಹೋರಾತ್ರಿ ಧರಣಿ ನಡೆಸುವುದಾಗಿ ಘೋಷಿಸಿದರು. ಬಳಿಕ ಸುಳ್ಯ ತಹಸೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಸ್ಥಳಕ್ಕೆ ಆಗಮಿಸಿ ರೈತರ ಅಹವಾಲು ಆಲಿಸಿದರು. ಬಳಿಕ ಸಹಕಾರಿ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ರೈತರ ಅಹವಾಲು ಸ್ವೀಕರಿಸಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ ಸಾಲ ಮನ್ನಾ ಎಲ್ಲಾ ರೈತರ ಖಾತೆಗಳಿಗೆ ಜಮಾ ಮಾಡುವಂತೆ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರು. ಈ ಹಿನ್ನಲೆಯಲ್ಲಿ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.

ಪ್ರತಿಭಟನೆಯಲ್ಲಿ ರೈತ ಸಂಘ ರಾಜ್ಯ ಕಾರ್ಯದರ್ಶಿ ರವಿಕಿರಣ ಪುಣಚ, ರೈತಸಂಘ ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಲೊಲಜಾಕ್ಷ ಭೂತಕಲ್ಲು ,ಪ್ರಧಾನ ಕರ್ಯದರ್ಶಿ ತೀರ್ಥರಾಮ ನೆಡ್ಚಿಲು ,ಜಿಲ್ಲಾ ಕಾರ್ಯದರ್ಶಿ ದಿವಾಕರ ಪೈ ಮಜಿಗುಂಡಿ,ಖಜಾಂಜಿ ದೇವಪ್ಪ,ಅರಂತೋಡು ವಲಯ ಅಧ್ಯಕ್ಷ ತೀರ್ಥರಾಮ ಉಳುವಾರು,ಕಾರ್ಯದರ್ಶಿ ಮೋಹನ್ ಅಡ್ತಲೆ ಮತ್ತಿತರರು ಭಾಗವಹಿಸಿದ್ದರು. ಅರಂತೋಡು ,ಅಲೆಟ್ಟಿ ,ಉಬರಡ್ಕ, ಮಡಪ್ಪಾಡಿ ಜಾಲ್ಸೂರು, ಅಜ್ಜಾವರ ಮುಂತಾದ ಗ್ರಾಮಗಳ ರೈತರು ಭಾಗಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಎಲೆಚುಕ್ಕೆ ರೋಗ | ತಕ್ಷಣದ ಪರಿಹಾರಕ್ಕಿಂತ ವೈಜ್ಞಾನಿಕ ನಿರ್ವಹಣೆ ಮುಖ್ಯ | 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ ಪರಿಹಾರ
April 7, 2026
11:25 AM
by: ಮಹೇಶ್ ಪುಚ್ಚಪ್ಪಾಡಿ
ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ
April 7, 2026
7:41 AM
by: ಮಿರರ್‌ ಡೆಸ್ಕ್
ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ
April 7, 2026
7:34 AM
by: ಮಿರರ್‌ ಡೆಸ್ಕ್
ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror