ಸಿಎಂ ಗ್ರಾಮ ವಾಸ್ತವ್ಯಕ್ಕೆ ಟ್ವಿಟ್ಟರ್ ಮೂಲಕ ಸುಳ್ಯಕ್ಕೆ ಆಹ್ವಾನ

June 2, 2019
9:30 PM

ಸುಳ್ಯ: ಶೀಘ್ರವೇ ಸರಕಾರಿ ಶಾಲೆಗಳಲ್ಲಿ ಗ್ರಾಮ ವಾಸ್ತವ್ಯ ಆರಂಭಿಸುವುದಾಗಿ ರಾಜ್ಯ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಘೋಷಿಸಿಕೊಂಡಿದ್ದಾರೆ. ಇದಕ್ಕೆ ಸುಳ್ಯ ತಾಲೂಕಿನ ಗಡಿ ಗ್ರಾಮದ ಸರಕಾರಿ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡುವಂತೆ ಸುಳ್ಯದ ವಕೀಲ ಧರ್ಮಪಾಲ ಕೊಯಿಂಗಾಜೆ ಇದಕ್ಕೆ ಪ್ರತಿಕ್ರಿಯೆ ನೀಡುವ ಮೂಲಕ ಸಿಎಂ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ.
ಜನರೊಂದಿಗೆ ಬೆರೆಯಲು ಅವರ ಸಮಸ್ಯೆಗಳನ್ನು ತಿಳಿಯಲು, ಸರಕಾರದ ಕಾರ್ಯವೈಖರಿ ತಿಳಿಯಲು ನೆರವಾಗುವುದು ಗ್ರಾಮ ವಾಸ್ತವ್ಯ. ಶೀಘ್ರವೇ ಸರಕಾರಿ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ. ಇದೇ ಟ್ವೀಟ್ ಗೆ ಪ್ರತಿಕ್ರಿಯೆ ಮಾಡಿರುವ ಧರ್ಮಪಾಲ ಅವರು ಸುಳ್ಯಕ್ಕೆ ಆಗಮಿಸುವಂತೆ ಆಹ್ವಾನ ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕೋಲ್ಚಾರು ಎಂಬಲ್ಲಿ ಕೇರಳ ಗಡಿ ಪ್ರದೇಶಕ್ಕೆ ಹೊಂದಿಕೊಂಡು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಇದೆ. ಇಲ್ಲಿ ಗ್ರಾಮ ವಾಸ್ತವ್ಯ ಮಾಡಿ ಸುಳ್ಯ ತಾಲೂಕಿನ ಸಮಸ್ಯೆ ಬಗೆಹರಿಸಬೇಕು ಎಂದು ಧರ್ಮಪಾಲ ಕೊಯಿಂಗಾಜೆ ಟ್ವೀಟ್ ಮಾಡಿ ವಿನಂತಿಸಿಕೊಂಡಿದ್ದಾರೆ. ಇದಕ್ಕೆ ಸೀಎಂ ಅವರಿಂದ ಪ್ರತಿಕ್ರಿಯೆ ಬರಲಿಲ್ಲ. ಆದರೆ ಅಧಿಕಾರಿ ವಲಯ ಇದನ್ನು ಗುರುತಿಸಿಕೊಂಡಿದೆ.

 

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05.11.2025 | ಎಲ್ಲೆಲ್ಲಾ ಮಳೆ ನಿರೀಕ್ಷೆ..? ನಿರೀಕ್ಷೆಯಂತೆ ಮಳೆಯಾಗದಿರಲು ಕಾರಣವೇನು..?
November 5, 2025
2:24 PM
by: ಸಾಯಿಶೇಖರ್ ಕರಿಕಳ
ಹಸಿರು ಹೈಡ್ರೋಜನ್ ಘಟಕ ಕಾರ್ಯಾಚರಣೆ | ಹಸಿರು ಇಂಧನ ಉತ್ಪಾದನೆಗೆ ಒತ್ತು
August 1, 2025
7:38 PM
by: The Rural Mirror ಸುದ್ದಿಜಾಲ
ಮಕ್ಕಳ ಪುಟ | ನಿಮ್ಮ ಚಿತ್ರ -ನಮ್ಮ ಬೆಳಕು | ಅಯಂಶಿ ಕೆ.ಎಚ್ , ಬಹರೇನ್
July 5, 2025
8:00 AM
by: ದ ರೂರಲ್ ಮಿರರ್.ಕಾಂ
ನಿಮ್ಮ ಚಿತ್ರ – ನಮ್ಮ ಬೆಳಕು | ಅನಿರುದ್ಧ ಪಿ |
June 30, 2025
5:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror