ಸುಬ್ರಹ್ಮಣ್ಯದಲ್ಲಿ ಮರದ ಕೊಂಬೆ ಬಿದ್ದು ಗಾಯ

June 11, 2019
8:23 PM

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ  ಕೆ ಎಸ್ ಆರ್ ಟಿಸಿ  ಬಸ್ ನಿಲ್ದಾಣದ ಮುಂಭಾಗದ ರಸ್ತೆ ಬದಿ ಖಾಸಗಿ ವಾಹನಗಳು ಪಾರ್ಕಿಂಗ್ ಮಾಡುತ್ತಿರುವ ಸ್ಥಳದಲ್ಲಿದ್ದ ಅಶ್ವತ್ಥ ಮರದ ಕೊಂಬೆ  ಮುರಿದು ಬಿದ್ದು ಬಿಳಿನೆಲೆ ನಿವಾಸಿ ಹರಿಶ್ಚಂದ್ರ ಎಂಬವರು  ಗಾಯಗೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ.

Advertisement
Advertisement

ಹರಿಶ್ಚಂದ್ರ ಅವರು ಕೆಲಸ ಮುಗಿಸಿ ಮನೆಗೆ ತೆರಳಲೆಂದು ಖಾಸಗಿ ವಾಹನ ನಿಲುಗಡೆಯ ಮರದ ಕೆಳಗೆ ವಾಹನಕ್ಕೆ ಕಾದು ನಿಂತಿದ್ದರು . ಇದೇ ವೇಳೆ ಮರದ ಕೊಂಬೆ ತುಂಡಾಗಿ  ಬಿದ್ದು ಗಾಯಗೊಂಡಿದ್ದಾರೆ. ತಲೆಗೆ ಹಾಗು ಎಡ ಭುಜಕ್ಕೆ ತೀವ್ರಸ್ವರೂಪದ ಗಾಯಗಳಾಗಿದೆ. ಗಾಯಾಳುವನ್ನು ತಕ್ಷಣ   ಆಂಬುಲೆನ್ಸ್ ವಾಹನದ ಮೂಲಕ ನಿಟ್ಟೆ ಸದಾನಂದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮರದ ಬುಡದಲ್ಲಿ ಅನೇಕ ಮಂದಿ ಇದ್ದು ಕೊಂಬೆ ಮುರಿಯುವ ಶಬ್ಧ ಕೇಳಿ ಅವರೆಲ್ಲರು ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Advertisement

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಂಗಳೂರು ಮುಳಿಯದಲ್ಲಿ ಮುಳಿಯ ಪಾಕೋತ್ಸವ…
July 18, 2024
10:39 AM
by: ದ ರೂರಲ್ ಮಿರರ್.ಕಾಂ
ಪುತ್ತೂರಿನಲ್ಲಿ ಮಹಿಳಾ ಜಾಗೃತಿ ಕಾರ್ಯಕ್ರಮ
July 18, 2024
10:08 AM
by: ದ ರೂರಲ್ ಮಿರರ್.ಕಾಂ
ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ
May 12, 2024
11:34 AM
by: The Rural Mirror ಸುದ್ದಿಜಾಲ
ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |
May 7, 2024
3:13 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror