ಸುಳ್ಯದಲ್ಲಿ ಅಖಂಡ ಭಾರತ ಸಂಕಲ್ಪ ದಿನಾಚರಣೆ

August 14, 2019
10:03 PM

ಸುಳ್ಯ: ತ್ರಿಖಂಡವಾದ ಭಾರತ ಮತ್ತೆ ಒಂದಾಗಬೇಕು ಎಂಬ ಸಂಕಲ್ಪದೊಂದಿಗೆ ವಿಶ್ವ ಹಿಂದೂ ಪರಿಷತ್, ಭಜರಂಗದಳ ಸುಳ್ಯ ಪ್ರಖಂಡ ಇದರ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನಾಚರಣೆ ಮತ್ತು ಪಂಜಿನ ಮೆರವಣಿಗೆ ಸುಳ್ಯದಲ್ಲಿ ನಡೆಯಿತು.
ಶಿವಕೃಪಾ ಕಲಾ ಮಂದಿರದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಗಣಪತಿ ಭಟ್ ಮಜಿಗುಂಡಿ ಅಧ್ಯಕ್ಷ ತೆ ವಹಿಸಿದ್ದರು. ನ್ಯಾಯವಾದಿ ಪ್ರಜ್ವಲ್ ಕುಮಾರ್ ದಿಕ್ಸೂಚಿ ಭಾಷಣ ಮಾಡಿದರು. ನಿವೃತ್ತ ಸೈನಿಕ ಎ.ವಿ.ಶಿವಲಿಂಗೇ ಗೌಡ ಮುಖ್ಯ ಅತಿಥಿಯಾಗಿದ್ದರು.
ಭಜರಂಗದಳ ತಾಲೂಕು ಸಂಚಾಲಕ ನಿಕೇಶ್ ಉಬರಡ್ಕ ಪ್ರತಿಜ್ಞೆ ಬೋಧಿಸಿದರು. ನಗರ ಸಂಚಾಲಕ ದೀಕ್ಷಿತ್ ಪಾನತ್ತಿಲ ವೇದಿಕೆಯಲ್ಲಿದ್ದರು. ನಗರ ಕಾರ್ಯದರ್ಶಿ ಪ್ರವೀಣ್ ಜಯನಗರ ಸ್ವಾಗತಿಸಿ, ತಿರ್ಥೇಶ್ ವಂದಿಸಿದರು. ಸುಮಿತ್ ವಂದೆ ಮಾತರಂ ಹಾಡಿದರು. ಗಿರೀಶ್ ಕುಂಠಿನಿ ಕಾರ್ಯಕ್ರಮ ನಿರೂಪಿಸಿದರು.

ಇದಕ್ಕೂ ಮುನ್ನ ನಗರದಲ್ಲಿ ಪಂಜಿನ ಮೆರವಣಿಗೆ ನಡೆಯಿತು. ಸುಳ್ಯ ಜ್ಯೋತಿ ವೃತ್ತದ ಬಳಿಯಿಂದ ಆರಂಭಗೊಂಡ ಪಂಜಿನ ಮೆರವಣಿಗೆ ಸುಳ್ಯ ನಗರದ ಮುಖ್ಯ ರಸ್ತೆಯಲ್ಲಿ ಸಾಗಿ ಗಾಂಧಿನಗರಕ್ಕೆ ತೆರಳಿ ಅಲ್ಲಿಂದ ಹಿಂತಿರುಗಿ ಖಾಸಗೀ ಬಸ್ ನಿಲ್ದಾಣದ ಬಳಿಯಲ್ಲಿರುವ ಶಿವಕೃಪಾ ಕಲಾ ಮಂದಿರದಲ್ಲಿ ಸಮಾಪನಗೊಂಡಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror