ಸುಳ್ಯದಲ್ಲಿ ಗುರು ಪೂಜಾ ಉತ್ಸವ

July 17, 2019
6:00 PM

ಸುಳ್ಯ : ಪ್ರಕೃತಿಯೇ ನಮಗೆ ಗುರು .ಆದರಿಂದ ನಾವು ಅನೇಕ ಪಾಠಕಲಿಯಬಹುದು.ಕಾಗೆ ಆಹಾರ ಕಂಡೊಡನೆ ತನ್ನೆಲ್ಲ ಬಳಗವನ್ನು ಕರೆಯುವ ಸಂಘಟನೆಯ ಪಾಠ . ಇರುವೆಯಿಂದ ಶಿಸ್ತು. ನಾಯಿಂದ ನಿಷ್ಠೆ ಹೀಗೆ ಹತ್ತಾರು ಮೌಲ್ಯಗಳು ಪ್ರಕೃತಿ ನೀಡುತ್ತಿದೆ . ಜಗತ್ತಿಗೆ ವೇದ, ಯೋಗ, ಜ್ಞಾನ, ತಂತ್ರಜ್ಞಾನವನ್ನು ಪರಿಚಯಿಸಿದ ದೇಶ ಭಾರತ ಎಂದು ಮಂಗಳೂರು ವಿಭಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಬೌದ್ಧಿಕ್ ಪ್ರಮುಖ್ ರಾಜೇಶ್ ಯಂ. ತಿಳಿಸಿದರು.

Advertisement
Advertisement

ಅವರು ಸುಳ್ಯದ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ಸುಳ್ಯ ನಗರ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆಶ್ರಯದಲ್ಲಿ ನಡೆದ ಶ್ರೀಗುರು ಪೂಜಾ ಉತ್ಸವದಲ್ಲಿ ಬೌದ್ಧಿಕ್ ನೀಡಿದರು.
ಸಭಾಧ್ಯಕ್ಷತೆಯನ್ನು ನಿವೃತ್ತ ಪ್ರಾಂಶುಪಾಲ ಪ್ರೊ| ಕೆ.ವಿ.ದಾಮೋದರ ಗೌಡ ವಹಿಸಿ, ವಿವೇಕವಿಲ್ಲದ ಜ್ಞಾನ ಸಮಾಜಕ್ಕೆ ಅಪಾಯಕಾರಿ ಹೆಚ್ಚು ಹೆಚ್ಚು ಕಲಿತಂತೆ ನಮ್ಮಲ್ಲಿ ಆಂತರಿಕ ಪರಿವರ್ತನೆಯಾಗಿ ಕಲಿತ ವಿದ್ಯೆ ಸಾರ್ಥಕಗೊಳ್ಳಬೇಕು. ಗುರು ಪೂರ್ಣಿಮೆ ಗುರು ಶಿಷ್ಯರ ಅನುಸಂಧಾನ ಎಂದರು.

ಸುಳ್ಯ ತಾಲೂಕು ಸಂಘಚಾಲಕ ಚಂದ್ರಶೇಖರ ತಳೂರು ವೇದಿಕೆಯಲ್ಲಿದ್ದರು. ನೂರಾರು ಸ್ವಯಂಸೇವಕರು ಭಾಗವಹಿಸಿ ಗುರುವಂದನೆ ಸಲ್ಲಿಸಿದರು. ಸತೀಶ ಕಾಟೂರು, ರಾಜೇಶ್ ಮೇನಾಲ, ಸುದರ್ಶನ ಸೂರ್ತಿಲ ಮೊದಲಾದವರು ಸಹಕರಿಸಿದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?
February 15, 2026
6:13 AM
by: ಮಿರರ್‌ ಡೆಸ್ಕ್
ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ
February 15, 2026
5:54 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror