ಸುಳ್ಯದ ಕತೆ ಎಂತ ಮಾರಾಯ್ರೆ ? ಇಲಾಖೆಗಳು ಸರಿ ಆಗುವುದು ಯಾವಾಗ ?

June 10, 2019
1:34 PM

ಸುಳ್ಯ: ಅಲ್ಲ ಮಾರಾಯ್ರೆ ಇದೆಂತ ಸುಳ್ಯದ ಕತೆ. ಅಲ್ಲಿ  ನೋಡಿದ್ರೆ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ  ಅಧಿಕಾರಿಯೊಬ್ಬರು ಲಂಚ ತೆಗೆಯುತ್ತಿರುವುದು  ಬೆಳಕಿಗೆ ಬಂದಿದೆ.

ಇಲ್ಲಿ  ನೋಡಿದ್ರೆ ನಗರ ಪಂಚಾಯತ್ ನಲ್ಲಿ ಮತ್ತೊಂದು ಸಮಸ್ಯೆ . ನೀರಿಲ್ಲ , ಬೀದಿ ದೀಪ ಸರಿ ಇಲ್ಲ ಅಂತ ಸದಸ್ಯರೊಬ್ಬರು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಸರಿ ಆಗುವುದು  ಯಾವಾಗ ಮಾರ್ರೆ ಇದೆಲ್ಲಾ ? ಸರಿ ಆಗುತ್ತಾ  ಅಂತ ಹತಾಶೆ ಪ್ರಶ್ನೆ ಕೇಳುವ ಮುನ್ನ  ಸರಿಯಾಗಲಿ.

ಇವತ್ತೇನಾಯ್ತು ?

ನಗರ ಪಂಚಾಯತ್ ನ ಬೋರುಗುಡ್ಡೆ ವಾರ್ಡ್ ನಲ್ಲಿ ಕಳೆದ ಎರಡು ವಾರಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. ಬೀದಿ ದೀಪ ವ್ಯವಸ್ಥೆ ಸರಿ ಇಲ್ಲ. ಇದನ್ನು ಪ್ರತಿಭಟಿಸಿ ನಗರ ಪಂಚಾಯತ್ ಸದಸ್ಯ ಕೆ.ಎಸ್‌.ಉಮ್ಮರ್ ನಗರ ಪಂಚಾಯತ್ ಗೆ ಆಗಮಿಸಿ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ತೀವ್ರ ತರಾಟೆಗೆತ್ತಿಕೊಂಡ ಘಟನೆ ನಡೆದಿದೆ.

ಎರಡು ವಾರಗಳಿಂದ ಜನರು ಮತ್ತು ಜನಪ್ರತಿನಿಧಿಗಳು ನಿರಂತರ ಬೇಡಿಕೆ ಸಲ್ಲಿಸುತ್ತಾ ಬಂದಿದ್ದರೂ ಪ್ರತಿಕ್ರಿಯೆ ಸಿಕ್ಕಿಲ್ಲ ಸಮಸ್ಯೆ ಪರಿಹಾರವಾಗಿಲ್ಲ ಎಂದು ಸೋಮವಾರ ಬೆಳಿಗ್ಗೆ ನಗರ ಪಂಚಾಯತ್ ಗೆ ಆಗಮಿಸಿದ ಉಮ್ಮರ್ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ತೀವ್ರ ತರಾಟಡಗೆತ್ತಿಕೊಂಡರು. ಇದರ ವೀಡಿಯೋ ವೈರಲ್ ಆಗಿದೆ.

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror