ಸುಳ್ಯದ ರೈಲ್ವೇ ಪ್ರಯಾಣಿಕನ ಟ್ವಿಟ್ಟರ್ ದೂರಿಗೆ ತಕ್ಷಣ ಸ್ಪಂದಿಸಿದ ರೈಲ್ವೇ ಇಲಾಖೆ

May 29, 2019
10:34 AM

ಸುಳ್ಯ: ಮುಂಬಯಿಯಿಂದ ರೈಲ್ವೇ ಪ್ರಯಾಣ ಬೆಳೆಸಿದ ಸುಳ್ಯದ ಅವ್ಯಕ್ತ ಅವರ ಟ್ವಿಟ್ಟರ್ ದೂರಿಗೆ ರೈಲ್ವೇ ಇಲಾಖೆ ತಕ್ಷಣವೇ ಸ್ಪಂದಿಸಿ ಕೇವಲ 15 ನಿಮಿಷದಲ್ಲಿ ಪರಿಹಾರ ದೊರಕಿದೆ.

Advertisement
Advertisement

ಅವ್ಯಕ್ತ ಅವರು ಮುಂಬಯಿಯಿಂದ ಸುಳ್ಯದ ನಗರಸಭಾ ಚುನಾವಣೆಗೆ ಮತದಾನಕ್ಕಾಗಿ ನಿನ್ನೆ ರಾತ್ರಿ ರೈಲಿನಲ್ಲಿ  ಹೊರಟಿದ್ದರು. ರೈಲಿನಲ್ಲಿ  ಮುಂಬಯಿಂದ ಏರಿದ ಅವರಿಗೆ ಸರಿಯಾದ ದಿಂಬಿನ ವ್ಯವಸ್ಥೆ ಇದ್ದಿರಲಿಲ್ಲ. ಈ ಬಗ್ಗೆ ವಿಚಾರಣೆಗೂ ಸರಿಯಾದ ಅವಕಾಶ ಇರಲಿಲ್ಲ. ಇದಕ್ಕಾಗಿ ತಕ್ಷಣವೇ   ಟ್ವೀಟ್  ಮೂಲಕ ಪಿಯೂಶ್ ಗೋಯಲ್ ಹಾಗೂ ರೈಲ್ವೇ ಇಲಾಖೆಗೆ ಟ್ಯಾಗ್ ಮಾಡಿ ತಮ್ಮ ಸಮಸ್ಯೆಯನ್ನು  ಹೇಳಿದರು. ಅದಾದ ಮರುಕ್ಷಣವೇ ರೈಲ್ವೇ ಇಲಾಖೆಯಿಂದ  ಅವ್ಯಕ್ತ ಅವರು ಇರುವ ಬೋಗಿ ಹಾಗೂ ವಿವರ ಕೇಳಿ ಮೆಸೇಜ್ ಬಂತು. ಮುಂದೆ 15 ನಿಮಿಷದಲ್ಲಿ ಅವರ ಸಮಸ್ಯೆ ಪರಿಹಾರ ಕಂಡಿತು. ರೈಲ್ವೇ ಇಲಾಖೆ ಅಧಿಕಾರಿಗಳು ತಕ್ಷಣವೇ ಸ್ಪಂದನೆ ನೀಡಿದರು.

Advertisement
Advertisement

ಇದೊಂದೇ ಅಲ್ಲ, ಈ ಹಿಂದೆ ಅವ್ಯಕ್ತ ಅವರ ಲ್ಯಾಪ್ ಟಾಪ್ ರೈಲು ನಿಲ್ದಾಣದಲ್ಲಿ ಕಳವಾಗಿತ್ತು. ಈ ಸಂದಭದಲ್ಲಿ ತಕ್ಷಣವೇ ಟ್ವೀಟ್ ಮಾಡಿದ್ದರು. ಆಗಲೂ ಪಿಯೋಶ್ ಗೋಯಲ್ ಅವರ ಕಚೇರಿಯಿಂದ ಅಧಿಕಾರಿಗಳು ಹಾಗೂ ಸಿಬಂದಿಗಳು  ತಕ್ಷಣವೇ ಸ್ಪಂದನೆ ನೀಡಿ ಸಿಸಿ ಟಿವಿ ದೃಶ್ಯವನ್ನು ಕೂಡಾ ವೀಕ್ಷಣೆ ಮಾಡಿದ್ದರು. ಕಳ್ಳನ ಪತ್ತೆಗೆ ಸತತ ಪ್ರಯತ್ನ ಮಾಡಿದ್ದರು. ಇದೆಲ್ಲಾ ಕೇವಲ ಒಂದು ಟ್ವೀಟ್ ನಿಂದ. ಅದಕ್ಕಿಂತಲೂ ಮಿಗಿಲಾಗಿ ಒಂದು ಟ್ವೀಟ್ ಗೆ ಇಲಾಖೆಗಳು, ಸಚಿವರು ಸ್ಪಂದಿಸುವ ರೀತಿ ಖುಷಿಯಾಗಿದೆ ಎನ್ನುತ್ತಾರೆ ಅವ್ಯಕ್ತ. ಈ ದೇಶದಲ್ಲಿ ಜನಸಾಮಾನ್ಯನ ದೂರಿಗೆ, ಮನವಿಗೆ ಬೆಲೆ ಇದೆ ಎನ್ನುವುದು ಇಲ್ಲಿ  ತಿಳಿಯುತ್ತದೆ. ದೇಶದಲ್ಲಿ ಯಾರೂ ಅನಾಥರಾಗುವುದಿಲ್ಲ, ಎಲ್ಲರೂ ಟ್ವೀಟ್ ಮೂಲಕ ಇಲಾಖೆ ಜೊತೆ ಮಾತನಾಡಬಹುದು ಎಂಬುದಕ್ಕೆ ಇದೊಂದು ಸಾಕ್ಷಿ ಎನ್ನುತ್ತಾರೆ ಅವ್ಯಕ್ತ.

    ಅವ್ಯಕ್ತ  ಸುಳ್ಯದ ಬೀಗ್ರೋಸ್ ಮಾಲಕ. ಆರ್ ಕೆ ಭಟ್ ಸುಳ್ಯ ಅವರ ಪುತ್ರ.

Advertisement

 

Advertisement

 

Advertisement

 

 

Advertisement

 

Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / th[email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇಂದು ರಾಷ್ಟ್ರೀಯ ಪಕ್ಷಿ ದಿನ ಹಾಗೂ ಪಕ್ಷಿತಜ್ಞ ಸಲೀಂ ಅಲಿ ಯವರ ಜನ್ಮದಿನ
November 12, 2023
3:09 PM
by: The Rural Mirror ಸುದ್ದಿಜಾಲ
#NalinKumarKateel | ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ – ನಳಿನ್‌ ಕುಮಾರ್‌ ಸ್ಪಷ್ಟನೆ | ಸೋಲಿನ ಕಾರಣಗಳನ್ನು ಹಿರಿಯರಿಗೆ ಹೇಳಿದ್ದೇನೆ |
June 24, 2023
1:16 PM
by: ದ ರೂರಲ್ ಮಿರರ್.ಕಾಂ
ಇನ್ನೂ ಬಾರದ ವರುಣ | ಮಳೆಗಾಗಿ ನಾಳೆ KRSನಲ್ಲಿ ವಿಶೇಷ ಹೋಮ | ವರುಣನ ಕೃಪೆಗೆ ಕಾದು ಕುಳಿತ ರೈತ |
June 12, 2023
11:29 AM
by: The Rural Mirror ಸುದ್ದಿಜಾಲ
ವೆದರ್‌ ಮಿರರ್‌ | 07-06-2023 | ವಿವಿದೆಡೆ ತುಂತುರು ಮಳೆ | ಜೂ.13 ಚಂಡಮಾರುತ ಪ್ರಭಾವದ ಬಳಿಕವೇ ಮುಂಗಾರು ಚುರುಕು |
June 7, 2023
11:14 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror