ಸುಳ್ಯ ಕ್ಷೇತ್ರದ ಮೂವರು ಗೆಲುವಿನತ್ತ

May 23, 2019
1:50 PM

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದವರಾಗಿದ್ದು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಮೂರು ಮಂದಿ ನಾಯಕರು ಭರ್ಜರಿ ಗೆಲುವಿನತ್ತ ಮುನ್ನಡೆದಿದ್ದಾರೆ.

ದ.ಕ.ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ, ಬೆಂಗಳೂರು ಉತ್ತರ ಕ್ಷೇತ್ತದ ಅಭ್ಯರ್ಥಿ ಡಿ.ವಿ.ಸದಾನಂದ ಗೌಡ ಸುಳ್ಯ ಕ್ಷೇತ್ರದವರಾಗಿದ್ದು ಬೇರೆ ಬೇರೆ ಕ್ಷೇತ್ರದಲ್ಲಿ ಚುನಾವಣೆ ಸ್ಪರ್ಧಿಸಿದ್ದಾರೆ. ಈ ಮೂವರು ಕೂಡ ಭರ್ಜರಿ ಗೆಲುವಿನತ್ತ ಮುನ್ನಡೆದಿದ್ದಾರೆ.

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ದೇವರಗುಂಡದವರಾದ ಸದಾನಂದ ಗೌಡ ನಾಲ್ಕನೆ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾದ್ದಾರೆ. ಕಡಬ ತಾಲೂಕಿನ ಪಾಲ್ತಾಡಿ ಕುಂಜಾಡಿಯವರಾದ ನಳಿನ್ ಕುಮಾರ್ ಮೂರನೇ ಬಾರಿ ದ.ಕ.ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಕಡಬ ತಾಲೂಕಿನ ಚಾರ್ವಾಕದವರಾದ ಶೋಭಾ ಕರಂದ್ಲಾಜೆ ಎರಡನೇ ಬಾರಿ ಉಡುಪಿ-ಚಿಕಮಗಳೂರು ಕ್ಷೇತ್ರದಿಂದ ಸ್ಪರ್ಧೆಗಿಳಿದಿದ್ದಾರೆ. ಸುಳ್ಯ ತಾಲೂಕಿನವರಾದ ಈ ಮೂವರು ಗೆಲುವಿನತ್ತ ಮುನ್ನಡೆದಿರುವುದು ಸುಳ್ಯ ಬಿಜೆಪಿಯಲ್ಲಿ ಸಂಭ್ರಮ ಇನ್ನಷ್ಟು ಹೆಚ್ಚಿಸಿದೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಂಟ್ವಾಳ : ನಾವೂರು ಪೋಯಿಲೊಡಿಯಲ್ಲಿ ಏಣಿಗಳ ವಿತರಣೆ
November 16, 2025
10:18 AM
by: ದ ರೂರಲ್ ಮಿರರ್.ಕಾಂ
ಸುಳ್ಯ, ಅಜ್ಜಾವರ : ಕೃಷಿ ಸಖಿಯರ ಮೂಲಕ ರೈತರಿಗೆ ಏಣಿಗಳ ವಿತರಣೆ
November 16, 2025
10:16 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಉತ್ಪನ್ನಗಳ ಪರಿಣಾಮಗಳ ಕುರಿತು ಹೆಚ್ಚಿನ ಸಂಶೋಧನೆಗಳು ಅತ್ಯಗತ್ಯ
November 12, 2025
7:07 AM
by: ದ ರೂರಲ್ ಮಿರರ್.ಕಾಂ
ರಾಜ್ಯ ಸರ್ಕಾರದಿಂದ ಬಿಳಿ ಜೋಳಕ್ಕೆ ಬೆಂಬಲ ಬೆಲೆ ಘೋಷಣೆ
November 12, 2025
6:30 AM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror