ಸುಳ್ಯ ನಗರದ ಕಸ ಮತ್ತೆ ಕಲ್ಚೆರ್ಪೆಗೆ : ಸ್ಥಳೀಯರಿಂದ ಪ್ರತಿಭಟನೆ

October 14, 2019
10:12 PM

ಸುಳ್ಯ: ಸುಳ್ಯ ನಗರದ ಕಸವನ್ನು ನಗರ ಪಂಚಾಯತ್ ಕಲ್ಚೆರ್ಪೆಗೆ ಮತ್ತೆ ತಂದು ಹಾಕುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಕಲ್ಚೆರ್ಪೆಯಲ್ಲಿ ಅ.14 ರಂದು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಮಡಿಕೇರಿ ತಾ.ಪಂ. ಸದಸ್ಯ ನಾಗೇಶ್ ಕುಂದಲ್ಪಾಡಿ ಇಲ್ಲಿ ಕಸ ಹಾಕುವ ಪ್ರಸ್ತಾಪ ಆರಂಭದಲ್ಲಿ ಬಂದಾಗ ನಾವು ಹೋರಾಟ ನಡೆಸಿದ್ದೆವು. ಆದರೆ ಇಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ ವ್ಯವಸ್ಥೆ ಮಾಡುವುದಾಗಿ ಹೇಳಿ ಕಸ ಹಾಕಲು ಆರಂಭಿಸಿದ್ದರು. ಆದರೆ ಆಧುನಿಕ ತಂತ್ರಜ್ಞಾನದ ಸಹಾಯದಿಂದ ಕಸ ವಿಲೇವಾರಿ ಮಾಡಿಲ್ಲ. ಕಸವನ್ನು ಹಾಗೆ ತಂದು ಹಾಕಲಾಯಿತು. ಇದರಿಂದ ಈ ಪರಿಸರದ ಜನರು ತೀವ್ರ ತೊಂದರೆ ಅನುಭವಿಸುವಂತಾಯಿತು. ಇಲ್ಲಿಗೆ ಕಸ ಹಾಕುವುದು ಮುಂದುವರಿದರೆ ಇನ್ನಷ್ಟು ತೊಂದರೆ ಆಗಬಹುದು, ಅಲ್ಲದೆ ನಗರ ಪಂಚಾಯತ್ ಕೂಡ ಸಮಸ್ಯೆ ಎದುರಿಸಬೇಕಾದೀತು ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಅಶೋಕ್ ಪೀಚೆ ಇಲ್ಲಿಗೆ ಕಸ ಹಾಕಿ ಸಾರ್ವಜನಿಕರಿಗೆ ತೊಂದರೆ ನೀಡಬಾರದು ಎಂಬುದು ನಮ್ಮ ಬೇಡಿಕೆ. ಜನರ ಭಾವನೆಗಳಿಗೆ ವಿರುದ್ಧವಾಗಿ ಕಸ ಹಾಕುವುದು ಮುಂದೆವರಿದರೆ ಉಗ್ರ ಹೋರಾಟ ನಡೆಸಲಾಗುವುದು ಎಂದರು.

ನ.ಪಂ. ಮಾಜಿ ಸದಸ್ಯ ಕೆ.ಗೋಕುಲ್‌ದಾಸ್ ಮಾತನಾಡಿ ನಾನು ನ.ಪಂ. ಸದಸ್ಯನಾಗಿದ್ದ ಸಂದರ್ಭ ಕಲ್ಚರ್ಪೆಗೆ ಕಸ ಹಾಕಬಾರದೆಂದು ಗಟ್ಟಿಯಾಗಿ ಧ್ವನಿ ಎತ್ತಿದ್ದೆ. ಬದಲಿ ಜಾಗದ ವ್ಯವಸ್ಥೆಯ ಬಗ್ಗೆಯೂ ಸಲಹೆ ನೀಡಿದ್ದೆ. ಒಂದು ವರ್ಷದಿಂದ ಈ ಪ್ರದೇಶಕ್ಕೆ ಕಸ ಬರುತ್ತಿರಲಿಲ್ಲ. ಈಗ ಮತ್ತೆ ಬರುತ್ತಿದೆ. ಇದನ್ನು ತಕ್ಷಣ ನಿಲ್ಲಿಸಬೇಕು ಇಲ್ಲವಾದರೆ ನ.ಪಂ. ಮುತ್ತಿಗೆ ಹಾಕಲಾಗುವುದು ಎಂದು ಹೇಳಿದರು.

ಆಲೆಟ್ಟಿ ಗ್ರಾ.ಪಂ. ಅಧ್ಯಕ್ಷ ಹರೀಶ್ ಹಾಗೂ ಸದಸ್ಯ ಯೂಸಫ್ ಅಂಜಿಕಾರು ಮಾತನಾಡಿದರು. ಬಾಪೂ ಸಾಹೇಬ್, ಪುಷ್ಪಾವತಿ, ರಾಧಾಕೃಷ್ಣ ಪರಿವಾರಕಾನ, ಜನಾರ್ದನ , ದೇವಕಿ, ಜಲಜಾಕ್ಷಿ, ಬಾಲಚಂದ್ರ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಅನ್ನವೇ ಪರಮಾತ್ಮ” ಸಂದೇಶದೊಂದಿಗೆ ಗೋಕರ್ಣದಲ್ಲಿ ಈ ಬಾರಿ ರಾಘವೇಶ್ವರ ಶ್ರೀಗಳಿಂದ ‘ಅನ್ನಬ್ರಹ್ಮ ಚಾತುರ್ಮಾಸ್ಯ’
June 20, 2026
7:10 AM
by: ದ ರೂರಲ್ ಮಿರರ್.ಕಾಂ
ತಿರಸ್ಕೃತ ಮಾವು, ತೆಂಗಿನಿಂದಲೂ ಕೋಟಿ ಮೌಲ್ಯದ ಉದ್ಯಮ – ‘ಜೀರೋ ವೇಸ್ಟ್’ ಮಾದರಿ ರೈತರಿಗೆ ಹೊಸ ಆಶಾಕಿರಣ
June 20, 2026
7:00 AM
by: ದ ರೂರಲ್ ಮಿರರ್.ಕಾಂ
2050 ರೊಳಗೆ ಕ್ಯಾನ್ಸರ್ ಚಿಕಿತ್ಸಾ ಕ್ಷೇತ್ರದಲ್ಲಿ 10 ಕೋಟಿ ಸಿಬ್ಬಂದಿ ಕೊರತೆ..? ನರ್ಸ್‌ಗಳು, ಡಯಾಗ್ನೋಸ್ಟಿಕ್ ತಜ್ಞರೇ ಹೆಚ್ಚು ಕೊರತೆಯಾಗುವ ಎಚ್ಚರಿಕೆ
June 20, 2026
6:49 AM
by: ಮಿರರ್‌ ಡೆಸ್ಕ್
ಮಹಾರಾಷ್ಟ್ರದಲ್ಲಿ50 ಕ್ಕೂ ಹೆಚ್ಚು ಅಡಿಕೆ ಲಾರಿಗಳಿಗೆ ತಡೆ – ವ್ಯಾಪಾರಿಗಳಿಗೆ ಸಂಕಷ್ಟ- ಶಿವಮೊಗ್ಗ ಸಂಸದ, ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಮನವಿ
June 19, 2026
10:54 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror