ಸುಳ್ಯ ನಗರಾಡಳಿತದ ಚುಕ್ಕಾಣಿ ಯಾರಿಗೆ..?

May 29, 2019
10:09 PM

ಸುಳ್ಯ: ನಗರ ಪಂಚಾಯತ್ ಆಡಳಿತ ಯಾರಿಗೆ ಒಲಿಯುತ್ತದೆ ? ಈ ಪ್ರಶ್ನೆ ಎಲ್ಲೆಡೆ ಇದೆ. ಕುತೂಹಲ ಎಲ್ಲರಿಗೂ ಇದೆ. ಕಳೆದ ಕೆಲವು ದಿನಗಳಿಂದ ಈ ಬಗ್ಗೆ ಚರ್ಚೆ ಆಗುತ್ತಲೇ ಇತ್ತು. ಈಗಲೂ ಆಗುತ್ತಿದೆ.  ಈಗ ನಗರ ಪಂಚಾಯತ್ ಚುನಾವಣೆ ಮುಗಿದು ಮತದಾರನ ತೀರ್ಪು ಇ.ವಿ.ಎಂನಲ್ಲಿ ಭದ್ರವಾಗಿದೆ. ಇನ್ನು ಕೇವಲ 36 ಗಂಟೆಗಳಲ್ಲಿ ನಗರ ಪಂಚಾಯತ್ ನ ಆಡಳಿತ ಯಾರಿಗೆ ಒಲಿಯಲಿದೆ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ. ಅಧಿಕೃತವಾಗಿ ಫಲಿತಾಂಶ ಹೊರಬರಲಿದೆ.

Advertisement

ನಗರ ಪಂಚಾಯತ್ ನಲ್ಲಿ ಮತ್ತೆ ಕಮಲ ಅರಳುತ್ತದಾ.. … ಅಥವಾ ಆಡಳಿತ ಕೈ ವಶವಾಗುತ್ತದಾ ಎಂಬ ಕುತೂಹಲ ಎಲ್ಲೆಡೆ ಮನೆ ಮಾಡಿದೆ.

ಸುಳ್ಯನ್ಯೂಸ್.ಕಾಂ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಎಲ್ಲಾ ಪಕ್ಷಗಳ ಪ್ರಮುಖರೊಂದಿಗೆ ಮತ್ತು 20 ವಾರ್ಡ್ ಗಳ ಮತದಾರರೊಂದಿಗೆ ಮಾತುಕತೆ ನಡೆಸಿದಾಗ ಬಂದ ಅಭಿಪ್ರಾಯಗಳನ್ನು ಕ್ರೂಡೀಕರಿಸಿ ಇದನ್ನು ಓದುಗರ ಮುಂದಿಡುತ್ತಿದ್ದೇವೆ.

20 ವಾರ್ಡ್ ಗಳಲ್ಲಿ ಏಳು ವಾರ್ಡ್ ಗಳಲ್ಲಿ ಬಿರುಸಿನ ಮತ್ತು ತೀವ್ರ ಪೈಪೋಟಿ ಕಂಡು ಬಂದಿದೆ. ಪೋಟೋ ಫಿನೀಶ್ ಫಲಿತಾಂಶ ನೀಡುವ ಈ 7 ವಾರ್ಡ್ ಗಳು ನಿರ್ಣಾಯಕವಾಗಲಿದೆ. ಒಟ್ಟಿನಲ್ಲಿ ಎರಡೂ ಪಕ್ಷಗಳಿಗೆ ತಮ್ಮ ಭದ್ರವಾದ ವಾರ್ಡ್ ಗಳನ್ನು ಪಡೆಯುವುದರ ಜೊತೆಗೆ ಈ 7 ವಾರ್ಡ್ ಯಾರ ತೆಕ್ಕೆಗೆ ಬೀಳುತ್ತದೆ ಎಂಬುದರ ಆಧಾರದಲ್ಲಿ ಅಧಿಕಾರದ ಸಾಧ್ಯತೆಯನ್ನು ತೆರೆದಿಡಲಿದೆ.

7 ವಾರ್ಡ್ ಗಳ ಫಲಿತಾಂಶದ ಕುತೂಹಲ ಉಳಿದಿದ್ದು ಈ ವಾರ್ಡ್ ಗಳ ಫಲಿತಾಂಶ ಎರಡೂ ಪಕ್ಷಗಳಿಗೆ ಹಂಚಿ ಹೋಗಲಿದ್ದು ಆಡಳಿತಾರೂಢ ಬಿಜೆಪಿ 10 ರಿಂದ 13 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದ್ದರೆ ಕಾಂಗ್ರೆಸ್ 8 ರಿಂದ 11 ಸ್ಥಾನಗಳನ್ನು ಪಡೆಯುವ ಸಾಧ್ಯತೆ ಇದೆ. ಒಂದು ಸ್ಥಾನ ಎಸ್ ಡಿ‌ ಪಿ ಐ ಮತ್ತು ಒಂದು ಸ್ಥಾನ ಪಕ್ಷೇತರರು ಪಡೆಯುವ ಸಾಧ್ಯತೆ ಇದೆ.

 

( ಸುಳ್ಯನ್ಯೂಸ್.ಕಾಂ ತಂಡ ಮತದಾರರೊಂದಿಗೆ ಮಾತನಾಡಿದ ಹಾಗೂ ಪ್ರಮುಖರೊಂದಿಗೆ ಮಾತನಾಡಿದ ಆಧಾರದಲ್ಲಿ ಈ ವಿಶ್ಲೇಷಣೆ ಮಾಡಲಾಗಿದೆ. ಯಾವುದೇ ವೈಜ್ಞಾನಿಕ ಆಧಾರದಲ್ಲಿ  ಸಮೀಕ್ಷೆ ನಡೆಸಿಲ್ಲ. ಹೀಗಾಗಿ ಶೇ.100 ರಷ್ಟು ಖಚಿತವಾದ ವಿಶ್ಲೇಷಣೆ ಸಾಧ್ಯವಾಗಿಲ್ಲ. ಇದು ಮೇಲ್ನೋಟದ ಮಾಹಿತಿಯಷ್ಟೇ. ಇದರಲ್ಲಿ ಬದಲಾವಣೆ ಆಗುವ ಸಾಧ್ಯತೆಯೂ ಇದೆ. – ಸಂಪಾದಕ )

 

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರ ಅನುಕೂಲಕ್ಕಾಗಿ ಭತ್ತ, ಬಿಳಿ ಜೋಳ  ಖರೀದಿಗೆ ಮುಂದಾದ ರಾಜ್ಯ ಸರ್ಕಾರ
April 18, 2025
6:00 AM
by: The Rural Mirror ಸುದ್ದಿಜಾಲ
ಶಿರಾಡಿ ಘಾಟಿ | ರಾಷ್ಟ್ರೀಯ ಹೆದ್ದಾರಿ -ರೈಲು ಸಂಪರ್ಕ ಅಭಿವೃದ್ದಿಗೆ ಸಂಯೋಜಿತ ಡಿಪಿಆರ್ ತಯಾರಿಸಲು ಮನವಿ
April 17, 2025
6:41 PM
by: The Rural Mirror ಸುದ್ದಿಜಾಲ
ಮಳೆಗಾಲ ಸಿದ್ಧತೆ | ಚರಂಡಿ ಹೂಳೆತ್ತಲು ಜಿಲ್ಲಾಧಿಕಾರಿ ಸೂಚನೆ
April 17, 2025
6:35 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 17-04-2025 | ಎ.20 ರಿಂದ ರಾಜ್ಯದ ವಿವಿದೆಡೆ ಮತ್ತೆ ಮಳೆ
April 17, 2025
4:50 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror