ಸುಳ್ಯ : ನೆಹರು ಮೆಮೋರಿಯಲ್ ಪ.ಪೂ.ಕಾಲೇಜಿನಲ್ಲಿ ವಿಶ್ವ ಪರಿಸರ ದಿನ ಆಚರಣೆ

June 7, 2019
11:00 AM

ಸುಳ್ಯ:  ಮಾನವ ಇಂದು ಸ್ವಾರ್ಥಕ್ಕಾಗಿ ಪ್ರಕೃತಿಯ ಅಸ್ತಿತ್ವಕ್ಕೆ ಧಕ್ಕೆ ಉಂಟುಮಾಡುತ್ತಿದ್ದಾನೆ. ಒಂದು ಮಿತಿಯವರೆಗೆ ಪ್ರಕೃತಿ ಮಾತೆ ತನ್ನ ಮೇಲಿನ ದೌರ್ಜನ್ಯಗಳನ್ನು ಸಹಿಸಿಕೊಳ್ಳುತ್ತಾಳೆ. ಮೇರೆ ಮಿರಿದಂತೆ ವಿಕೃತ ರೂಪ ತೋರುತ್ತಾಳೆ ಎಂದು ಸುಳ್ಯ ಎನ್ನೆಂಸಿಯ ರಸಾಯನಶಾಸ್ತ್ರ ಉಪನ್ಯಾಸಕಿ ಪ್ರಣಿತ ಬೆಳ್ಳೂರು ಹೇಳಿದರು

Advertisement
Advertisement

ಅವರು ನೆಹರು ಮೆಮೋರಿಯಲ್ ಪ.ಪೂ.ಕಾಲೇಜು ಸುಳ್ಯ ಇದರ ವತಿಯಿಂದ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು. ಮರಗಳು ಹೀಗೆ ನಶಿಸುತ್ತಾ ಹೋದರೆ ಭವಿಷ್ಯದಲ್ಲಿ ಮುಂದೊಂದು ದಿನ ಆಕ್ಸಿಜನ್ ಸಿಲಿಂಡರ್ ಗಳನ್ನು ನೇತು ಹಾಕಿಕೊಂಡು ಜೀವನ ಸಾಗಿಸಬೇಕಾದ ದೌರ್ಭಾಗ್ಯ ನಮ್ಮದಾಗುತ್ತದೆ ಎಂಬ ಎಚ್ಚರಿಕೆ ನೀಡಿದರು.
ಪ್ರಾಂಶುಪಾಲೆ  ಹರಿಣಿ ಪುತ್ತೂರಾಯ ಇವರು ಸಭಾದ್ಯಕ್ಷತೆ ವಹಿಸಿ ಪರಿಸರ ಕಾಳಜಿಯನ್ನು ಎಲ್ಲರೂ ವಹಿಸಬೇಕೆಂದು ಕರೆ ನೀಡಿದರು.

ವೇದಿಕೆಯಲ್ಲಿ ವಿ.ಕ್ಷೇಮಾಧಿಕಾರಿ ಲಕ್ಷ್ಮಣ್ ಏನೇಕಲ್ ,ಕಾರ್ಯಕ್ರಮ ಸಂಯೋಜಕರಾದ ದಾಮೋದರ ಪಿ ,ರತ್ನಾವತಿ ಬಿ, ಕು.ವಿನುತ ಕೆ.ಎನ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಪ್ರದ್ಯುಮ್ನ,ಶ್ರೀಶ ನಾರಾಯಣ ಎ ಪರಿಸರ ದಿನದ ಮಹತ್ವದ ಕುರಿತು ಮಾತನಾಡಿದರು. ವಿದ್ಯಾರ್ಥಿಗಳಾದ ರಾಜಿತ ಪ್ರಾರ್ಥಿಸಿದರು, ನವ್ಯಕೃಷ್ಣ ಕೆ.ಎಸ್ ಸ್ವಾಗತಿಸಿ, ಅನಘ ಆರ್ ಯು,ನಂದಿತ ಎಂ.ವಿ,ಚರೀಷ್ಮ ಡಿ.ಎಸ್,ಅಕ್ಷತ ಎಸ್ ಪರಿಸರ ಗೀತೆ ಹಾಡಿದರು. ಪೃಥ್ವಿಶ್ರೀ ಕೆ ಅತಿಥಿಗಳನ್ನು ಪರಿಚಯಿಸಿದರು. ಕೌಶಿಕ್ ಕುರುಂಜಿ ವಂದಿಸಿದರು. ಜ್ಞಾನೇಶ್ ಕೆ.ಜೆ ನಿರೂಪಿಸಿದರು.
ಇದೇ ಸಂದರ್ಭದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಡೆದ ಭಾಷಣ, ಪ್ರಬಂಧ ಸ್ಪರ್ಧೆಗಳ ವಿಜೇತರಿಗೆ ಪ್ರಾಂಶುಪಾಲರು ಬಹುಮಾನ ವಿತರಿಸಿದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ
ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ
ಜ.4 : ಮುಕ್ಕೂರಿನಲ್ಲಿ ಕಾಳುಮೆಣಸು, ಕಾಫಿ ಗಿಡ ಕೃಷಿ ಮತ್ತು ನಿರ್ವಹಣೆ ಹಾಗೂ ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣ , ಮಣ್ಣಿನ ಪೋಷಕಾಂಶಗಳ ಬಗ್ಗೆ ಮಾಹಿತಿ ಕಾರ್ಯಾಗಾರ
December 28, 2025
11:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror