ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರಾಗಿ ನವೀನ್ ಚಂದ್ರ ಜೋಗಿ ಅಧಿಕಾರ ಸ್ವೀಕಾರ – ಸತೀಶ್ ಕುಮಾರ್ ರಿಗೆ ಬೀಳ್ಕೊಡುಗೆ

November 29, 2019
9:48 PM

ಸುಳ್ಯ: ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರಾಗಿ ನವೀನ್ ಚಂದ್ರ ಜೋಗಿ ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಸುಳ್ಯ ವೃತ್ತ ನಿರೀಕ್ಷಕ ಆರ್.ಸತೀಶ್ ಕುಮಾರ್ ಅಧಿಕಾರ ಹಸ್ತಾಂತರಿಸಿದ್ದಾರೆ.

2.8 ವರ್ಷಗಳ ಕಾಲ ಸುಳ್ಯ ವೃತ್ತ ನಿರೀಕ್ಷಕರಾಗಿದ್ದ ಸತೀಶ್ ಕುಮಾರ್ ಅವರಿಗೆ ಬೆಂಗಳೂರು ಪೊಲೀಸ್ ಪ್ರಧಾನ ಕಚೇರಿಗೆ ವರ್ಗಾವಣೆಯಾಗಿದೆ. ನೂತನ ವೃತ್ತ ನಿರೀಕ್ಷಕರಾಗಿ ರಾಜ್ಯ ಗುಪ್ತವಾರ್ತೆಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದ ನವೀನ್ ಚಂದ್ರ ಜೋಗಿ ಆಗಮಿಸಿದ್ದಾರೆ. ಉಡುಪಿ ಜಿಲ್ಲೆಯ ಕಾಪು ಮೂಲದವರಾದ ನವೀನ್ ಚಂದ್ರ ಜೋಗಿ ಅವರು ಈ ಹಿಂದೆ ಲೋಕಾಯುಕ್ತ, ರಾಜ್ಯ ಗುಪ್ತ ವಾರ್ತೆ,ಉಡುಪಿ ನಗರ ವೃತ್ತಗಳಲ್ಲಿ ಇನ್ಸ್ ಪೆಕ್ಟರ್ ಆಗಿ ಕಾರ್ಯ ನಿರ್ವಹಿಸಿದ್ದರು.  ನೂತನ ವೃತ್ತ ನಿರೀಕ್ಷಕರು ಅಧಿಕಾರ ವಹಿಸುವ ಸಂದರ್ಭದಲ್ಲಿ ಸುಳ್ಯ ಆರಕ್ಷಕ ಉಪನಿರೀಕ್ಷಕ ಎಂ.ಆರ್.ಹರೀಶ್, ಅಪರಾಧ ಪತ್ತೆ ವಿಭಾಗದ ಎಸ್.ಐ ರತ್ನಕುಮಾರ್, ಪ್ರೊಬೇಷನರಿ ಎಸ್.ಐ ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು.

ಸನ್ಮಾನ, ಬೀಳ್ಕೊಡುಗೆ: ಸುಳ್ಯದಿಂದ ವರ್ಗಾವಣೆಯಾಗಿರುವ ವೃತ್ತ ನಿರೀಕ್ಷಕ ಸತೀಶ್ ಕುಮಾರ್ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಎಡಿಷನಲ್ ಎಸ್ ಪಿ ವಿಕ್ರಂ ಆಮ್ಟೆ ಸನ್ಮಾನ ನೆರವೇರಿಸಿದರು. ಡಿವೈಎಸ್ ಪಿ ದಿನಕರ ಶೆಟ್ಟಿ, ನೂತನ ಸಿಐ ನವೀನ್ ಚಂದ್ರ ಜೋಗಿ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು. ಸುಳ್ಯದಲ್ಲಿ ತನ್ನ ಕರ್ತವ್ಯದ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಸತೀಶ್ ಕುಮಾರ್ ಕೃತಜ್ಞತೆ ಸಲ್ಲಿಸಿದರು.

ಸತೀಶ್ ಕುಮಾರ್ ಸುದೀರ್ಘ ಸೇವೆ: ಸುಳ್ಯ ವೃತ್ತ ನಿರೀಕ್ಷಕರಾಗಿ 2.8 ವರ್ಷಗಳ ಸುದೀರ್ಘ ಕಾಲ ಕರ್ತವ್ಯ ನಿರ್ವಹಿಸಿದ್ದ ಆರ್.ಸತೀಶ್ ಕುಮಾರ್ ಜನಪರ ಅಧಿಕಾರಿ ಎಂದು ಹೆಸರು ಗಳಿಸಿದ್ದರು. ಸುಳ್ಯದಲ್ಲಿ ಸಿಐ ಆಗಿ ದೀರ್ಘ ಕಾಲ ಸೇವೆ ಸಲ್ಲಿಸಿದವರಲ್ಲಿ ಸತೀಶ್ ಕುಮಾರ್ ಎರಡನೆಯವರಾಗಿದ್ದಾರೆ. ಎಲ್ಲರೊಂದಿಗೂ ಆತ್ಮೀಯರಾಗಿ ಬೆರೆಯುತ್ತಿದ್ದ ಅವರು ರಾಜ್ಯ ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಭದ್ರತಾ ವ್ಯವಸ್ಥೆಯನ್ನು ಯಶಸ್ವಿಯಾಗಿ ನೀಭಾಯಿಸಿದ್ದರು. ಸುಳ್ಯ, ಬೆಳ್ಳಾರೆ, ಸುಬ್ರಹ್ಮಣ್ಯ ಠಾಣೆಗಳನ್ನೊಳಗೊಂಡ ಸುಳ್ಯ ವೃತ್ತದ ನಿರೀಕ್ಷಕರಾಗಿ ಶಾಂತಿ ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಒತ್ತು ನೀಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ
August 18, 2026
4:16 PM
by: ಸಾಯಿಶೇಖರ್ ಕರಿಕಳ
ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು
August 18, 2026
7:33 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ
August 18, 2026
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror