ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷರಾಗಿ ಹರೀಶ್ ಕಂಜಿಪಿಲಿ ಆಯ್ಕೆ

November 11, 2019
1:11 PM

ಸುಳ್ಯ:ಸುಳ್ಯ ಬಿಜೆಪಿ ಮಂಡಲ ಸಮಿತಿ ನೂತನ ಅಧ್ಯಕ್ಷರಾಗಿ ಹರೀಶ್ ಕಂಜಿಪಿಲಿ ಆಯ್ಕೆಯಾಗಿದ್ದಾರೆ. ಬಿಜೆಪಿ ಅಧ್ಯಕ್ಷರಾಗಿದ್ದ ವೆಂಕಟ್ ವಳಲಂಬೆ ಅವರ ಅವಧಿ ಮುಗಿದ ಹಿನ್ನಲೆಯಲ್ಲಿ ಹೊಸ ಅಧ್ಯಕ್ಷರ ಆಯ್ಕೆ ನಡೆಯಿತು. ಸುಳ್ಯ ವೆಂಕಟ್ರಮಣ ದೇವಸ್ಥಾನದ ಸಭಾಭವನದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಆಯ್ಕೆ ನಡೆಯಿತು. ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರುಗಳು, ಬಿಜೆಪಿ ಸಕ್ರೀಯ ಸದಸದರು, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ನಗರ ಪಂಚಾಯತ್ ಸದಸ್ಯರು ಭಾಗವಹಿಸಿದ್ದ ಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಜಿಲ್ಲಾ ಬಿಜೆಪಿ ಜಿಲ್ಲಾ ಚುನಾವಣಾ ಸಂಚಾಲಕ ಗೋಪಾಲಕೃಷ್ಣ ಹೇರಳೆ, ವಿಭಾಗ ಚುನಾವಣಾ ಪ್ರಭಾರಿ ಉದಯಕುಮಾರ್ ಶೆಟ್ಟಿ, ಶಾಸಕ ಎಸ್.ಅಂಗಾರ ಉಪಸ್ಥಿತರಿದ್ದರು. ಮಮಡಲ ಸಮಿತಿಯ ಉಳಿದ ಪದಾಧಿಕಾರಿಗಳ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ.

Advertisement
Advertisement
Advertisement
Advertisement
Advertisement

ಎರಡನೇ ಬಾರಿಗೆ ಹರೀಶ್ ಕಂಜಿಪಿಲಿ ಮಂಡಲ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ವೆಂಕಟ್ ವಳಲಂಬೆ ಅವರಿಗಿಂತ ಮೊದಲು ಮೂರು ವರ್ಷಗಳ ಕಾಲ ಮಂಡಲ ಸಮಿತಿ ಅಧ್ಯಕ್ಷರಾಗಿದ್ದರು. ಅರಂತೋಡು ಕ್ಷೇತ್ರದ ಜಿ. ಪಂ. ಸದಸ್ಯರಾಗಿರುವ ಹರೀಶ್ ಕಂಜಿಪಿಲಿ, ಸುಳ್ಯ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿದ್ದಾರೆ. ಸುಳ್ಯ ತಾಲೂಕು ಪಂಚಾಯತ್ ಉಪಾಧ್ಯಕ್ಷರಾಗಿ, ಸ್ಥಾಯಿ ಸಮಿತಿ ಅಧ್ಯಕ್ಷರಾಗಿ, ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |
March 6, 2025
12:27 PM
by: The Rural Mirror ಸುದ್ದಿಜಾಲ
ಹೊಸರುಚಿ | ಗುಜ್ಜೆ ಕಟ್ಲೇಟ್
March 6, 2025
11:27 AM
by: ದಿವ್ಯ ಮಹೇಶ್
ಕುಂಭಮೇಳ | ಪ್ರಯಾಗ ತಲಪುವಾಗ ಸಂತಸವೇ ಸಂತಸ…
March 6, 2025
10:52 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ
March 4, 2025
10:11 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror