ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಡ್ಡಂಬೈಲು ವೆಂಕಟ್ರಮಣ ಗೌಡರಿಗೆ ಶ್ರದ್ಧಾಂಜಲಿ

June 10, 2019
7:40 PM

ಸುಳ್ಯ: ಜೂ.8 ರಂದು ನಿಧನರಾದ ಸುಳ್ಯ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಪಡ್ಡಂಬೈಲು ವೆಂಕಟ್ರಮಣ ಗೌಡರಿಗೆ ಶ್ರದ್ಧಾಂಜಲಿ ಸಭೆಯು ಸುಳ್ಯ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

Advertisement

ಸಭೆಯಲ್ಲಿ ಕೆ.ಪಿಸಿ.ಸಿ ಕಾರ್ಯದರ್ಶಿ ಟಿ.ಎಂ. ಶಹೀದ್ ಮಾತನಾಡಿ ಸುಳ್ಯ ಕಾಂಗ್ರೆಸ್ ಪಕ್ಷ ದಲ್ಲಿ ಕಾರ್ಯಕರ್ತ ರನ್ನು ಒಗ್ಗೂಡಿಸುವ ಕಾರ್ಯವನ್ನು ಮಾಡಿದ ಇವರು ಪಕ್ಷಕ್ಕಾಗಿ ಆಹೋರಾತ್ರಿ ದುಡಿದವರು.ಸಮಾಜಕ್ಕಾಗಿ ಅಭಿವೃದ್ಧಿ ಕೆಲಸವನ್ನು ಮಾಡಲು ಅವಿರತವಾಗಿ ಶ್ರಮಿಸಿದರು.ಸುಳ್ಯ ನಗರದಲ್ಲಿ ಶಿಕ್ಷಣವನ್ನು ನೀಡಿದ ಇವರು ಉತ್ತಮ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ಶಿಕ್ಷಣ ಸಂಸ್ಥೆಗೆ ಪ್ರೇರಣೆಯಾದವರು ಎಂದು ಸ್ಮರಿಸಿದರು.

ಕರ್ನಾಟಕ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಪಿ.ಸಿ .ಜಯರಾಂ ಮಾತನಾಡಿ ಗ್ರಾಮೀಣಾಭಿವೃದ್ಧಿಯಲ್ಲಿ ಪಡ್ಡಂಬೈಲು ವೆಂಕಟ್ರಮಣರವರ ಸೇವೆ ಅವಿಸ್ಮರಣೀಯ ರಸ್ತೆ ,ಸೇತುವೆ ,ಮೂಲಭೂತ ಸೌಲಭ್ಯಗಳನ್ನು ಜನರಿಗೆ ತಲುಪಿಸಲು ಶ್ರಮಿಸಿದ ಇವರು ನಿರಂತರವಾಗಿ ಬಡವರ ಸಮಸ್ಯೆಗಳನ್ನು ಬಗೆಹರಿಸಲು ಸಹಕರಿಸಿದವರು.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಶೇಖರ ಕಾಮತ್ ಮಾತನಾಡಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಗಿ ದುಡಿದ ಇವರು ಪ್ರತಿಯೊಂದು ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಶ್ರಮ ವಹಿಸಿದವರು ಇವರು ಕೆವಿಜಿ ಕಾನೂನು ಕಾಲೇಜಿನ ಪ್ರಾಂಶುಪಾಲ ರಾಗಿ ಕೃಷಿ ಕರಾಗಿ ಸಮಾಜ ಸೇವಕರಾಗಿ ರಾಜಕೀಯ ನೇತಾರ ರಾಗಿ ಸಮಾಜಕ್ಕೆ ಕೊಡುಗೆ ನೀಡಿದವರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪಿ.ಎಸ್ .ಗಂಗಾಧರ್ ನುಡಿನಮನ ಸಲ್ಲಿಸಿದರು. ಸಭೆಯಲ್ಲಿ ಕೆ.ಎಂ.ಮುಸ್ತಫಾ , ನಂದರಾಜ್ ಸಂಕೇಶ್,ನಗರ ಪಂಚಾಯತ್ ಸದಸ್ಯ ಬಾಲಕೃಷ್ಣ ಭಟ್ ಕೊಡೆಂಕೆರಿ,ಸುಧೀರ್ ರೈ ಮೇನಾಲ, ಬೀರಾ ಮೊಯಿದಿನ್, ದಿನೇಶ್ ಅಂಬೆಕಲ್ಲು,ಶ್ರೀ ಹರಿ ಕುಕ್ಕೆಡೇಲು, ಪವಾಜ್ ಕನಕಮಜಲು,ಶಾಫಿ ಕುತ್ತಮೊಟ್ಟೆ ,ತಾಜುದ್ದೀನ್ ಅರಂತೋಡು ಮುಂತಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನಿಧನ ರಾದ ಸಾಹಿತಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಗಿರೀಶ್ ಕಾರ್ನಾಡ್ ಮತ್ತು ಕಾಂಗ್ರೆಸ್ ಕಾರ್ಯಕರ್ತ ಇಬ್ರಾಹಿಂ ಹಳೆಗೇಟು ಅವರಿಗೂ ಶ್ರದ್ಧಾಂಜಲಿ ಅರ್ಪಿಸಲಾಯಿತು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಟ್ಟೆ ವಿದ್ಯಾ ಸಂಸ್ಥೆಗಳು ಬಡಗನ್ನೂರು ಇನ್ನು ದ್ವಾರಕಾ ಪ್ರತಿಷ್ಠಾನ ಪುತ್ತೂರಿಗೆ ಸೇರ್ಪಡೆ
April 12, 2025
11:50 AM
by: The Rural Mirror ಸುದ್ದಿಜಾಲ
ಪಿಯುಸಿ ಫಲಿತಾಂಶ | ಶ್ರೇಯನ್‌ ಕಾವಿನಮೂಲೆ | ಸುಳ್ಯ ತಾಲೂಕು ಟಾಪರ್‌ | ರಾಜ್ಯಮಟ್ಟದಲ್ಲಿ 8 ನೇ ಸ್ಥಾನ |
April 9, 2025
2:58 PM
by: The Rural Mirror ಸುದ್ದಿಜಾಲ
ಕೃಷಿ ಸಖಿಯರ ಪ್ರಥಮ ಪ್ರಗತಿ ಪರಿಶೀಲನಾ ಸಭೆ | ವಿವಿಧ ತರಕಾರಿ ಬೀಜಗಳ ವಿತರಣೆ | ತರಕಾರಿ ಬೆಳೆಸುವ ವಿಧಾನಗಳ ಬಗ್ಗೆ ಮಾಹಿತಿ |
April 4, 2025
12:17 AM
by: ದ ರೂರಲ್ ಮಿರರ್.ಕಾಂ
ಮಲ್ಲಿಗೆ ಕೃಷಿ ತರಬೇತಿ ಕಾರ್ಯಾಗಾರ
March 31, 2025
11:23 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror