ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಹಾತ್ಮಾ ಗಾಂಧಿ 150 ನೇ ಜಯಂತಿ ಆಚರಣೆ

October 3, 2019
8:51 AM

ಸುಳ್ಯ:ಮಹಾತ್ಮಾ ಗಾಂಧೀಜಿಯವರ 150 ನೇ ಜಯಂತಿ ಆಚರಣೆ ಕನಕ ಮಜಲು ಗ್ರಾಮ ಕಾಂಗ್ರೆಸ್ ಆಶ್ರಯದಲ್ಲಿ ಕನಕ ಮಜಲು ಶ್ರೀಮತಿ ಸೀತಮ್ಮ ನರಿಯೂರು ಇವರ ಮನೆಯಲ್ಲಿ ನಡೆಯಿತು. ಕನಕ ಮಜಲು ಗ್ರಾಮ ಕಾಂಗ್ರೆಸ್ ಅಧ್ಯಕ್ಷ ಹೇಮಚಂದ್ರ ಕುತ್ಯಾಳ ರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಗಾಂಧೀವಾದಿ ಕೊರಂಬಡ್ಕ ಮೋನಪ್ಪ ಗೌಡರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನಿವೃತ್ತ ಅಧ್ಯಾಪಕರು ಕೇಪು ಸುಂದರ ಗೌಡ ನೆರವೇರಿಸಿದರು.

ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸ್ಥಳೀಯ ಸಮಿತಿ ಸುಳ್ಯ ಇದರ ಅಧ್ಯಕ್ಷ ಎಸ್ ಎಂ ಬಾಪು ಸಾಹೇಬ್ ಹಾಗು ನಿವೃತ್ತ ಪ್ರಾಧ್ಯಾಪಕ ಸೀತಾರಾಮ ಬುಡ್ಲೆಗುತ್ತು ಗಾಂಧೀ ಸಂದೇಶ ನೀಡಿದರು. ಮುಖ್ಯ ಅತಿಥಿ ಗಳಾಗಿ ಭಾಗವಹಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್. ಜಯಪ್ರಕಾಶ್ ರೈ, ಹಾಗು ಸುಳ್ಯ ವಕೀಲರ ಸಂಘದ ಅಧ್ಯಕ್ಷ ಎಂ. ವೆಂಕಪ್ಪ ಗೌಡ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕನಕ ಮಜಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕೆ. ಬೀರಾ ಮೊಯಿದೀನ್ ವಂದಿಸಿದರು. ವಿಜಯ ಕುಮಾರ ನರಿಯೂರು ಕಾರ್ಯಕ್ರಮ ನಿರೂಪಿಸಿದರು. ವಕೀಲ ಮಹಮ್ಮದ್ ಪವಾಜ್ , ನಂದರಾಜ್ ಸಂಕೇಶ, ಶಶಿಧರ ಎಂ ಜೆ, ಭವಾನಿಶಂಕರ್ ಕಲ್ಮಡ್ಕ, ದಿನೇಶ್ ಸರಸ್ವತಿ ಮಹಲು, ಗ್ರಾಮ ಸಮಿತಿ ಪದಾಧಿಕಾರಿಗಳು, ಸದಸ್ಯರು, ಸಾರ್ವಜನಿಕರು ಉಪಸ್ತಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror