ಸುಳ್ಯ ಮದ್ರಸ ಮನೇಜ್ ಮೆಂಟ್ ಪದಾಧಿಕಾರಿಗಳ ಆಯ್ಕೆ

December 4, 2019
10:58 AM

ಸುಳ್ಯ: ಸುಳ್ಯ ಮದ್ರಸ ಮನೇಜ್ ಮೆಂಟ್ ಇದರ ವಾರ್ಷಿಕ ಸಭೆ ಡಿ.3 ರಂದು ಮದ್ರಸ ಮನೇಜ್ ಮೆಂಟ್ ಜಿಲ್ಲಾ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಅಝಾದ್ ಅಧ್ಯಕ್ಷತೆಯಲ್ಲಿ ನಡೆಯಿತು . ಸುಳ್ಯ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷ ಉಮರ್ ಫೈಝಿ ಸಭೆಯನ್ನ ಉದ್ಘಾಟಿಸಿ ಮಾತನಾಡಿದರು. ಅಬ್ದುಲ್ ಹಮೀದ್ ಹಾಜಿ ವಾರ್ಷಿಕ ವರದಿ ಮಂಡಿಸಿದರು.

ಬಶೀರ್ ಯು ಪಿ ಬೆಳ್ಳಾರೆ

ನೂತನ ಪದಾಧಿಕಾರಿಗಳ ಆಯ್ಕೆ: ಸತತ 10 ನೇ ಬಾರಿ ಅಧ್ಯಕ್ಷರಾಗಿ ತಾಜ್ ಮಹಮ್ಮದ್ ಕಲ್ಲುಗುಂಡಿ, ಪ್ರಧಾನ ಕಾರ್ಯ ದರ್ಶಿಯಾಗಿ ಬಶೀರ್ ಯು ಪಿ ಬೆಳ್ಳಾರೆ, ಉಪಾಧ್ಯಕ್ಷರುಗಳಾಗಿ ಯು ಹೆಚ್ ಅಬೂಬಕ್ಕರ್ ಬೆಳ್ಳಾರೆ, ಅಬ್ದುಲ್ ಖಾದರ್, ಸುಪ್ರಿಂ ಅಹ್ಮದ್ ಹಾಜಿ, ಸಿ ಎಂ ಮಹಮ್ಮದ್ ಹಾಜಿ ಪೈಂಬಚ್ಚಾಲ್, ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ಖಾದರ್, ಅಕ್ಬರ್ ಕರಾವಳಿ, ಎಂ ಸಿ ಅಬೂಬಕ್ಕರ್ ಕಲ್ಲುಗುಂಡಿ, ಅಬೂಬಕ್ಕರ್ ಅಜ್ಜಾವರ, ಪತ್ರಿಕಾ ಕಾರ್ಯದರ್ಶಿಯಾಗಿ ಜಮಾಲುದ್ದೀನ್ ಕೆ ಎಸ್, ಜಿಲ್ಲಾ ಪ್ರತಿನಿಧಿಗಳಾಗಿ ಹಸೈನಾರ್ ಧರ್ಮತ್ತಣ್ಣಿ, ಕತ್ತಾರ್ ಇಬ್ರಾಹೀಂ ಹಾಜಿ ಆಯ್ಕೆಗೊಂಡು ಕಾರ್ಯಕಾರಿ ಸದಸ್ಯರನ್ನ ಒಳಗೊಂಡ ಸಮಿತಿ ರಚನೆಗೊಂಡಿತು .

ಅಹಮದ್ ಹಾಜಿ ಸುಳ್ಯ

ದ.ಕ ಜಿಲ್ಲಾ ಮದರಸ ಮನೇಜ್ ಮೆಂಟ್ ಪ್ರಧಾನ ಕಾರ್ಯದರ್ಶಿ ಕೆ ಎಂ ಮಹಮ್ಮದ್ ರಫೀಕ್, ದ.ಕ ಜಿಲ್ಲಾ ಮದರಸ ಮನೇಜ್ ಮೆಂಟ್ ಕಾರ್ಯದರ್ಶಿ ಶರೀಫ್ ಮುಕ್ರಂಪಾಡಿ ಚುನಾವಣಾ ವೀಕ್ಷಕರಾಗಿ ಕಾರ್ಯನಿರ್ವಹಿಸಿದರು .

ತಾಜ್ ಮಹಮ್ಮದ್ ಸ್ವಾಗತಿಸಿ, ದ.ಕ ಜಿಲ್ಲಾ ಜಂಇಯ್ಯತುಲ್ ಮುಅಲ್ಲಿಮೀನ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror