ಸುಳ್ಯ: ಶಾಂತಿಯುತ ಮತದಾನ :

April 19, 2019
4:38 AM

ತಾಲೂಕಿನಲ್ಲಿ ದಾಖಲೆಯ ಶೇ.84.10 ಮತದಾನ

Advertisement
Advertisement
Advertisement

ಸುಳ್ಯ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸುಳ್ಯದಲ್ಲಿ ಶಾಂತಿಯುತ ಮತದಾನ ನಡೆಯಿತು. ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ. ಸಂಜೆಯ ವೇಳೆಗೆ ಒಟ್ಟು ಶೇ.84.10 ಮತದಾನವಾಗಿದೆ. ದಾಖಲೆ ಪ್ರಮಾಣದಲ್ಲಿ ಮತದಾನ ಸುಳ್ಯ ತಾಲೂಕಿನಲ್ಲಿ ನಡೆದಿದ್ದು ಜಿಲ್ಲೆಯಲ್ಲಿ ಅತ್ಯಧಿಕ ಮತದಾನವಾದ ತಾಲೂಕಾಗಿದೆ.
ಬೆಳಿಗ್ಗೆ ಏಳು ಗಟೆಯಿಂದ ಮತದಾನ ಕಾರ್ಯ ಆರಂಭಗೊಂಡಿದ್ದು ಕೆಲವು ಬೂತ್‍ಗಳಲ್ಲಿ ಬೆಳಿಗ್ಗೆ ಆರು ಗಂಟೆಯಿಂದಲೇ ಸರತಿ ಸಾಲು ಇತ್ತು. ಬೆಳಿಗ್ಗೆ ಬಿರುಸಿನ ಮತದಾನ ನಡೆದರೆ ಬಳಿಕ ಸರತಿ ಸಾಲು ಕಡಿಮೆಯಾಗಿ ನಿಧಾನವಾಯಿತು. ಮಧ್ಯಾಹ್ನದ ಬಳಿಕ ಮತ್ತೆ ಬಿರುಸು ಪಡೆದುಕೊಂಡಿತ್ತು. ಕೆಲವು ಕಡೆಗಳಲ್ಲಿ ಮತಯಂತ್ರದಲ್ಲಿ ದೋಷ ಕಂಡು ಬಂದ ಹಿನ್ನಲೆಯಲ್ಲಿ ಅಂತಹಾ ಕಡೆಗಳಲ್ಲಿ ಕೂಡಲೇ ಬೇರೆ ಮತ ಯಂತ್ರವನ್ನು ಒದಗಿಸಿ ಮತದಾನ ಮುಂದುವರಿಸಲಾಯಿತು.
ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಕ್ಸಲ್ ಬಾದಿತ ಬೂತ್‍ಗಳಲ್ಲಿ, ಸೂಕ್ಷ್ಮ ಮತಗಟ್ಟೆಗಳಲ್ಲಿಯೂ ಬಿರುಸಿನ ಮತದಾನ ನಡೆಯಿತು. ಜನರು ನಿರಾಂತಕವಾಗಿ ಮತದಾನ ಮಾಡಿದರು. ಬಿಗು ಬಂದೋಬಸ್ತ್ ಏರ್ಪಡಿಸಲಾಗಿತ್ತು. ಕೇಂದ್ರೀಯ ಮೀಸಲು ಪಡೆ, ಪೊಲೀಸ್, ಗೃಹ ರಕ್ಷಕ ದಳ ಭದ್ರತೆಯನ್ನು ಒದಗಿಸಿತು. ಕ್ಷೇತ್ರದಲ್ಲಿ ನಕ್ಸಲ್ ಬಾದಿತ ಬೂತ್‍ಗಳು ಸೇರಿದಂತೆ ಕ್ರಿಟಿಕಲ್ ಬೂತ್‍ಗಳಲ್ಲಿ ವಿಶೇಷ ಭದ್ರತಾ ವ್ಯವಸ್ಥೆಯನ್ನು ಒದಗಿಸಲಾಯಿತು. 18 ಮೊಬೈಲ್ ಸ್ಕ್ವಾಡ್‍ಗಳು ಕ್ಷೇತ್ರದಲ್ಲಿ ಸಂಚಾರ ನಡೆಸಿದ್ದರು.

Advertisement

13 ಕಡೆ ವೆಬ್ ಕಾಸ್ಟಿಂಗ್:
13 ಬೂತ್‍ಗಳಲ್ಲಿ ವೆಬ್ ಕಾಸ್ಟಿಂಗ್, 15 ಬೂತ್‍ಗಳಲ್ಲಿ ವೀಡಿಯೋಗ್ರಾಫಿ ಮಾಡಲಾಯಿತು. 58 ಮೈಕ್ರೋ ವೀಕ್ಷಕರನ್ನು ನೇಮಕ ಮಾಡಲಾಗಿತ್ತು.
ಬೆಳಿಗ್ಗೆ ಎಲ್ಲಾ ಮತಗಟ್ಟೆಗಳಲ್ಲೂ ಉದ್ದದ ಸರತಿ ಸಾಲಿದ್ದು ಬಿರುಸಿನ ಮತದಾನ ನಡೆದರೆ ಬಳಿಕ ನಿಧಾನವಾಯಿತು. ಮಧ್ಯಾಹ್ನ ಒಂದು ಗಂಟೆ ಗಂಟೆಯ ವೇಳೆಗೆ ಶೇ.53.13 ಮತದಾನವಾಗಿತ್ತು. ಮಧ್ಯಾಹ್ನ ಮೂರು ಗಂಟೆಗೆ ಶೇ.65.04 ಮತದಾನವಾಗಿತ್ತು. ಕೆಲವು ಬೂತ್‍ಗಳಲ್ಲಿ ಮಧ್ಯಾಹ್ನದ ಬಳಿಕ ಮತ್ತು ಚುನಾವಣಾ ಸಮಯ ಮುಗಿಯುವ ವೇಳೆಗೆ ಮತದಾನ ಬಿರುಸುಗೊಂಡಿತು.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ವಂಚನೆ ಪ್ರಕರಣ | ಚೈತ್ರಾ ಗ್ಯಾಂಗ್‍ನ ಸಿಸಿಬಿ ಕಸ್ಟಡಿ ಇಂದು ಅಂತ್ಯ- ಬಹುತೇಕ ಮುಗಿದ ವಿಚಾರಣೆ : ಮತ್ತೆ ಕಸ್ಟಡಿಗಾ?, ಪರಪ್ಪನ ಅಗ್ರಹಾರಕ್ಕಾ?
September 23, 2023
11:44 AM
by: The Rural Mirror ಸುದ್ದಿಜಾಲ
PM Kisan AI Chatbot: ರೈತರ ಸಹಾಯಕ್ಕೆ AI : ಪಿಎಂ ಕಿಸಾನ್ ಸ್ಕೀಮ್​ನಲ್ಲಿ ಇನ್ಮುಂದೆ ರೈತರಿಗೆ ಸಹಾಯಕ್ಕೆ ಬರಲಿದೆ ಎಐ ಚಾಟ್​ಬೋಟ್
September 22, 2023
2:18 PM
by: The Rural Mirror ಸುದ್ದಿಜಾಲ
ತಮಿಳುನಾಡಿಗೆ ನೀರು ಬಿಡಲು ಸುಪ್ರೀಮ್ ಕೋರ್ಟ್ ಆದೇಶ | ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ, ವಿಧಾನಸೌಧ ಮುತ್ತಿಗೆ ಹಾಕಲು ಕರವೇ ನಿರ್ಧಾರ
September 21, 2023
1:37 PM
by: The Rural Mirror ಸುದ್ದಿಜಾಲ
#Education | ಶಿಕ್ಷಣ ವಂಚಿತ ಕುರಿಗಾಹಿ ಬಾಲಕ ಮರಳಿ ಶಾಲೆಗೆ | ಬಾಲಕನ ಭವಿಷ್ಯಕ್ಕೆ ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ
September 12, 2023
2:17 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror