ಸುಳ್ಯ ಶಾಸಕರಿಗೆ ಸಚಿವ ಸ್ಥಾನ- ಆದಿ ದ್ರಾವಿಡ ಸಮಾಜ ಸೇವಾ ಸಂಘ ಆಗ್ರಹ

August 27, 2019
10:02 PM

ಸುಳ್ಯ: ನಿರಂತರ ಆರು ಬಾರಿ ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ಯಾಗಿರುವ ಸುಳ್ಯದ ಎಸ್.ಅಂಗಾರರಿಗೆ ಕೂಡಲೇ ಸಚಿವ ಸ್ಥಾನ ನೀಡಬೇಕು ಎಂದು ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘ ಒತ್ತಾಯಿಸಿದೆ‌.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಗೌರವಾಧ್ಯಕ್ಷ ಕೆ.ಎಂ.ಬಾಬು ಜಾಲ್ಸೂರು ಶಾಸಕರಿಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆ ಎಲ್ಲರಿಗೂ ಇತ್ತು. ಆದರೆ ಕೊನೆಯ ಕ್ಷಣದಲ್ಲಿ‌‌ ತಪ್ಪಿದೆ. ಸಚಿವರಾಗುತ್ತಿದ್ದರೆ ಈ ಭಾಗದ ಅಭಿವೃದ್ಧಿಗೆ ಪೂರಕವಾಗುತ್ತಿತ್ತು. ಆದ್ದರಿಂದ ಇನ್ನಾದರೂ ಅವರಿಗೆ ಸಚಿವ ಸ್ಥಾನ ನೀಡಬೇಕು. ಸ್ಥಾನ ನೀಡದೇ ಇದ್ದರೆ ಎಲ್ಲ ದಲಿತ‌ ಸಂಘಟನೆಗಳು ಒಟ್ಟಾಗಿ ಸೇರಿ, ಜಿಲ್ಲೆ, ರಾಜ್ಯ ಮಟ್ಟದಲ್ಲಿ ಹೋರಾಟ ನಡೆಸುತ್ತೇವೆ. ಸಚಿವ ಸ್ಥಾನ ತಪ್ಪಿರುವುದಕ್ಕೆ ಜಿಲ್ಲೆಯ‌ ಇತರ ಶಾಸಕರು, ಮುಖಂಡರು ಕೂಡಾ‌ ಧ್ವನಿ ಎತ್ತದಿರುವುದು ಬೇಷರ ತಂದಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಮೋನಪ್ಪ ರಾಜಾರಾಂ ಪುರ, ಕಾರ್ಯದರ್ಶಿ ದಿಲೀಪ್ ಕೊಡಿಯಾಲಬೈಲು, ಖಜಾಂಜಿ ಮಲ್ಲೇಶ್ ಕುಡೆಕಲ್ಲು, ವಿಜಯ ಆಲಡ್ಕ, ಚಂದ್ರಕಾಂತ ಮೂಡಾಯಿತೋಟ, ಜಗನ್ನಾಥ, ಕೇಶವ ಕಲ್ಪಡ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?
September 8, 2026
9:43 AM
by: ದ ರೂರಲ್ ಮಿರರ್.ಕಾಂ
ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror