ಸುಳ್ಯ : ಶ್ರೀ ಗುರುರಾಯರ ಆರಾಧನಾ ಮಹೋತ್ಸವ

August 19, 2019
12:30 PM

ಸುಳ್ಯ: ಸುಳ್ಯದ ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ ಆಶ್ರಯದ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಶ್ರೀ ಗುರುರಾಯರ ಆರಾಧನಾ ಮಹೋತ್ಸವವು ವೇದಮೂರ್ತಿ ಶ್ರೀಹರಿ ಎಳಚಿತ್ತಾಯ ನೇತೃತ್ವದಲ್ಲಿ  ನಡೆಯಿತು.

ಪೂರ್ವಾಹ್ನ ಮಹಾ ಗಣಪತಿ ಹವನ, ಪವಮಾನ ಹೋಮ, ಅಲಂಕಾರ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.ಸಂಜೆ ಶ್ರೀ ಗುರು ರಾಘವೇಂದ್ರ ಭಜನಾ ಮಂಡಳಿ, ಮಹಿಳಾ ಪರಿಷತ್ ಸುಳ್ಯ ಮತ್ತು ಪಂಜದ ಶಿವಳ್ಳಿ ಸಂಪನ್ನ ಮಹಿಳಾ ಘಟಕದ ಸದಸ್ಯೆಯರಿಂದ ಭಜನಾ ಕಾರ್ಯಕ್ರಮ ನಡೆಯಿತು.ಬಳಿಕ ತೊಟ್ಟಿಲ ಸೇವೆ ನಡೆಯಿತು. ನೂತನವಾಗಿ ಗುರುಗಳಿಗೆ ತೊಟ್ಟಿಲನ್ನು ನೀಡಿದ ಕೃಷ್ಣ ನಾವಡ ಮತ್ತು ರವಿರಾಜ ನಾವಡ ಅವರನ್ನು ಹಾಗೂ ಚಪ್ಪರಕ್ಕೆ ಧನ ಸಹಾಯ ನೀಡಿದ ಕೇಶವ ಕೇಕುಣ್ಣಾಯ ಅವರನ್ನು ಗೌರವಿಸಲಾಯಿತು. ಅಷ್ಟಾವಧಾನ, ಸೇವೆಯಲ್ಲಿ ವೇದ, ವ್ಯಾಕರಣ, ಕಾವ್ಯ, ಜೋತಿಷ್ಯದಲ್ಲಿ ವೇದಮೂರ್ತಿಗಳಾದ ಶ್ರೀಹರಿ ಎಳಚಿತ್ತಾಯ, ಶ್ರೀವರ ಪಾಂಗಾಣ್ಣಾಯ, ಅರಂಬೂರು ಭಾರದ್ವಾಜ ಆಶ್ರಮದ ವೇದಪಾಠ ಶಾಲೆಯ ಪ್ರಾಂಶುಪಾಲ ವೇದಮೂರ್ತಿ ವೆಂಕಟೇಶ ಶಾಸ್ತ್ರಿ ಮತ್ತು ವೇದ ವಿದ್ಯಾರ್ಥಿಗಳು ಸಹಕರಿಸಿದರು.ಸಂಗೀತದಲ್ಲಿ ಕೃತಿಕಾ ಶಗ್ರಿತ್ತಾಯ, ಭಜನೆಯಲ್ಲಿ ಜಯಪ್ರಕಾಶ ಕಾಯರ್ತೋಡಿ, ಭರತನಾಟ್ಯದಲ್ಲಿ ಪೂರ್ವಿಕೃಷ್ಣ , ಚೆಂಡೆವಾದನ ಸುಮಂತ್ ಮತ್ತು ಸಮರ್ಥ ಕಡಂಬಳಿತ್ತಾಯ, ನಾಟಕದಲ್ಲಿ ತುಷಾರ ಗೌಡ ಸುಳ್ಯ ಮತ್ತು ಸಾಯಿ ನಕ್ಷತ್ರ, ಶೇಖರ ಮಣಿಯಾಣಿ ನೇತೃತ್ವದ ಮಹಾವಿಷ್ಣು ಚಿಕ್ಕಮೇಳದಿಂದ ಯಕ್ಷಗಾನ ಪ್ರದರ್ಶನ ನಡೆಯಿತು. ಅಷ್ಟಾವಧಾನವನ್ನು ಪ್ರಕಾಶ್ ಮೂಡಿತ್ತಾಯ ಸಂಘಟಿಸಿದ್ದು, ಸುಧನ್ವಕೃಷ್ಣ, ಪ್ರಥಮ ಮೂಡಿತ್ತಾಯ, ಅನುಷಾ ಭಾರ್ಗವಿ ಸಹಕರಿಸಿದರು.

ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಟ್ರಸ್ಟಿನ ಅಧ್ಯಕ್ಷ ಎಂ.ಎನ್.ಶ್ರೀಕೃಷ್ಣ ಸೋಮಯಾಗಿ ಮತ್ತು ಇತರ ಟ್ರಸ್ಟಿಯವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ
ಶಾಸ್ತ್ರ ಮತ್ತು ಆಧುನಿಕತೆಯ ಸಮನ್ವಯದ ಹಬ್ಬ — ಯುಗಾದಿ
March 19, 2026
8:15 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror