ಸ್ವಉದ್ಯೋಗ : ಬ್ಯಾಂಕ್ ಮೂಲಕ ಸಾಲ-ಸಹಾಯಧನ  ಸೌಲಭ್ಯ

January 23, 2020
8:29 PM

ಮಂಗಳೂರು :- ದಕ್ಷಿಣ ಕನ್ನಡ ಜಿಲ್ಲೆಯ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಸ್ವ ಉದ್ಯೋಗ ಪ್ರಾರಂಭಿಸಲು ಪಿ.ಎಂ.ಇ.ಜಿ.ಪಿ. ಯೋಜನೆ ಅಡಿಯಲ್ಲಿ  ಬ್ಯಾಂಕ್ ನಲ್ಲಿ ಸಾಲ ಅಥವಾ ಸಹಾಯಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಿದೆ.

ಯೋಜನೆಯು ಡಿ.ಐ.ಸಿ/ಕೆ.ವಿ.ಐ.ಸಿ/ಕೆ.ವಿ.ಐ.ಬಿ. ಮೂರು ಇಲಾಖೆಯಲ್ಲಿ ಸೌಲಭ್ಯ ಹೊಂದಿದೆ. ಗ್ರಾಮಾಂತರ ಅಭ್ಯರ್ಥಿಗಳಿಗೆ ಸಿ.ಎಂ.ಇ.ಜಿ.ಪಿ. ಯೋಜನೆ ಅಡಿಯಲ್ಲಿ ಡಿ.ಐ.ಸಿ/ಕೆ.ವಿ.ಬಿ ಎರಡು ಇಲಾಖೆಯಲ್ಲಿ ಸೌಲಭ್ಯ ಹೊಂದಿದೆ.

ಜಿಲ್ಲೆಯಲ್ಲಿ ಕೆಲವೊಂದು ಅನಧಿಕೃತ ವ್ಯಕ್ತಿಗಳು ತಾವು ಈ ಯೋಜನೆಯ ಕನ್‍ಸಲ್ಟೆಂಟ್ ಎಂದು ನಂಬಿಸಿ ಹಣ ವಸೂಲು ಮಾಡಿ ಜಿಲ್ಲೆಯ ಯುವಜನರಿಗೆ ಮೋಸ ಮಾಡುವುದು ಇಲಾಖೆಯ ಗಮನಕ್ಕೆ ಬಂದಿರುತ್ತದೆ. ಆದ್ದರಿಂದ ಈ ಯೋಜನೆಯಲ್ಲಿ ಸ್ವ ಉದ್ಯೋಗ ಕೈಗೊಳ್ಳಲು ಆಸಕ್ತರಿರುವ ಯುವಕ / ಯುವತಿಯರು ಅಂಶಗಳನ್ನು ಗುರುತಿಸಿ ಅರ್ಜಿ ಸಲ್ಲಿಸಬೇಕು.

ಆನ್‍ಲೈನ್ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ, ಅರ್ಜಿ ಸಲ್ಲಿಸಿದ ನಂತರ ನಿಗದಿತ ದಿನಾಂಕದಂದು ಸಂದರ್ಶನ ನಡೆಸಲಾಗುತ್ತದೆ, ಈ ಬಗ್ಗೆ ಅಭ್ಯರ್ಥಿಗಳಿಗೆ ಮುಂಚಿತವಾಗಿ ಸಂದೇಶ (SMS ) ಕಳುಹಿಸಲಾಗುತ್ತದೆ, ಅರ್ಜಿ ಸಲ್ಲಿಕೆಯಾದ ನಂತರ ವಿವಿಧ ಹಂತಗಳ ಪ್ರಗತಿಯನ್ನು ಆನ್‍ಲೈನ್‍ನಲ್ಲಿ ನೋಡಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಇಂಡಸ್ಟ್ರೀಯಲ್ ಎಸ್ಟೇಟ್, ಯೆಯ್ಯಾಡಿ, ದ.ಕ., ಮಂಗಳೂರು. ದೂರವಾಣಿ ಸಂಖ್ಯೆ 0824-2214021 ಸಂಪರ್ಕಿಸಬೇಕು ಎಂದು ಜಂಟೀ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ
July 18, 2026
8:59 PM
by: ಮಿರರ್‌ ಡೆಸ್ಕ್
ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ
July 9, 2026
8:51 PM
by: ದ ರೂರಲ್ ಮಿರರ್.ಕಾಂ
ಜೂನ್ 30ರೊಳಗೆ LPG e-KYC ಮಾಡಿಸದಿದ್ದರೆ ಗ್ಯಾಸ್ ಸಬ್ಸಿಡಿ ಸ್ಥಗಿತ ? ಗ್ರಾಹಕರಿಗೆ ಮಹತ್ವದ ಎಚ್ಚರಿಕೆ
June 21, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror