ಸ್ವಾತಂತ್ರ್ಯಕ್ಕೆ ಮೆರುಗು ಮೂಡುವುದೇ ಜವಾಬ್ದಾರಿಯ ತಳಹದಿಯಲ್ಲಿ…..

August 15, 2019
8:00 AM

ಸ್ವಾತಂತ್ರ್ಯದಿನ ಶುಭಾಶಯ. ಎಲ್ಲರಿಗೂ ಶುಭಾಶಯವನ್ನು ತಿಳಿಸುತ್ತಾ, ಈ ಸಂದರ್ಭ ನಮ್ಮ ಜವಾಬ್ದಾರಿ ಏನು ಎಂಬುದರ ಬಗ್ಗೆಯೂ ಅರಿಯಬೇಕಿದೆ. ಈ ಕಾರಣದಿಂದ ರಾಕೇಶ್ ಕುಮಾರ್ ಕಮ್ಮಜೆ ಅವರು ಲೇಖನವನ್ನು ಬರೆದಿದ್ದಾರೆ. ಈ ಕಡೆಗೆ ನಮ್ಮ ಬೆಳಕು…


ಸ್ವಾತಂತ್ರ್ಯ ಅನ್ನುವುದು ಸಕಲ ಜೀವರಾಶಿಗಳೂ ಸದಾ ಬಯಸುವ ಸಂಗತಿಯೇ ಹೌದು. ಅದರಲ್ಲೂ ಕಳೆದುಕೊಂಡ ಸ್ವಾತಂತ್ರ್ಯವನ್ನು ಮರಳಿ ಪಡೆದುಕೊಂಡವರಿಗೆ ಸ್ವಾತಂತ್ರ್ಯ ಉತ್ಸವವೆನಿಸುವುದರಲ್ಲಿ ಯಾವ ಸಂದೇಹವೂ ಇಲ್ಲ. ನಾವೂ ಹಾಗೆಯೇ!

ಸ್ವಾತಂತ್ರ್ಯ ಎಂಬ ಪದ ಬಿಡುಗಡೆ, ವಿಮೋಚನೆ ಎಂಬ ಅರ್ಥವನ್ನು ಹೊಮ್ಮಿಸುತ್ತದಾದರೂ, ಆ ಪದದ ಜತೆಜತೆಗೇ ಜವಾಬ್ದಾರಿ ಎಂಬ ಅಗೋಚರ ಭಾವವೂ ವ್ಯಕ್ತವಾಗುವುದನ್ನು ಗುರುತಿಸುವಲ್ಲಿ ಎಡವಬಾರದು. ಸ್ವಾತಂತ್ರ್ಯಕ್ಕೆ ಮೆರುಗು ಮೂಡುವುದೇ ಜವಾಬ್ದಾರಿಯ ತಳಹದಿಯಲ್ಲಿ ಎಂಬುದು ಸರ್ವವಿಧಿತ.

ನಮ್ಮ ದೇಶವೀಗ ವಿಶ್ವವಂದ್ಯ ಸ್ಥಾನವನ್ನು ಅಲಂಕರಿಸುವ ಸಾಮರ್ಥ್ಯವನ್ನು ಹೊರಸೂಸುತ್ತಿದೆ. ಅದಕ್ಕೆ ಬೇಕಾದ ಯೋಗ್ಯತೆಗಳೂ ಇಲ್ಲಿವೆ. ಆದರೆ ಇಂತಹ ಸಾರ್ವಭೌಮ ರಾಷ್ಟ್ರದ ಪ್ರಜೆಗಳು ಹೇಗಿರಬೇಕು? ಇತರರಿಗೆ ಮಾದರಿಯಾಗಲಿರುವವರ ಆಚಾರ, ವಿಚಾರ, ವ್ಯವಹಾರಗಳು ಎಂತಿರಬೇಕು? ಈ ಕುರಿತು ಆಲೋಚಿಸಲು ಇದು ಪ್ರಶಸ್ತ ಸಂದರ್ಭವೆನಿಸುತ್ತದೆ. ಹಾಗೆ ನೋಡಿದರೆ ದೇಶವೊಂದು ಉಚ್ರಾಯ ಸ್ಥಿತಿ ಅಥವ ಅಧಃಪತನ ಕಾಣುವುದಕ್ಕೆ ಅಲ್ಲಿನ ಜನರ ಮನಃಸ್ಥಿತಿಗಳೂ ಕಾರಣವಾಗುತ್ತವೆ ಎಂಬುದನ್ನು ಮರೆಯಬಾರದು. ಅಂದಹಾಗೆ, ನನ್ನ ದೇಶಕ್ಕೆ ನನ್ನ ಬಾಧ್ಯಸ್ಥಿಕೆ ಏನು ಎಂಬುದನ್ನು ನೆನಪು ಮಾಡುವುದಕ್ಕೇ ಈ ಸ್ವಾತಂತ್ರ್ಯ ದಿನಾಚರಣೆ ಬರುತ್ತಿದೆಯೇನೋ ಅನಿಸುತ್ತದೆ!

 

ರಾಕೇಶ್ ಕುಮಾರ್ ಕಮ್ಮಜೆ

ರಾಕೇಶ್ ಕುಮಾರ್ ಕಮ್ಮಜೆ

ಮುಖ್ಯಸ್ಥರು , ಪತ್ರಿಕೋದ್ಯಮ ವಿಭಾಗ

ವಿವೇಕಾನಂದ ಕಾಲೇಜು, ಪುತ್ತೂರು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
July 14, 2026
6:47 AM
by: ದ ರೂರಲ್ ಮಿರರ್.ಕಾಂ
ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ
July 14, 2026
6:41 AM
by: ದ ರೂರಲ್ ಮಿರರ್.ಕಾಂ
ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?
July 13, 2026
7:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror