ಹಿಂ ಜಾ ವೇ ವತಿಯಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

May 9, 2019
11:30 AM

ಸವಣೂರು : ಸವಣೂರು ಚಂದ್ರನಾಥ ಬಸದಿಯ ಪ್ರಿಯಕಾರಿಣಿ ಸಭಾಭವನದಲ್ಲಿ ಸವಣೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ  ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ ನಡೆಯಿತು.

Advertisement
Advertisement
Advertisement

ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಹಿಂದೂ ಮುಖಂಡ ರಾಜೇಶ್ ಶೆಟ್ಟಿ ಮೇನಾಲ ,ದೇಶದ ಆತ್ಮವೇ ಆಧ್ಯಾತ್ಮ . ದೇಶದಲ್ಲಿನ ಸಂಸ್ಕಾರ, ಸಂಸ್ಕೃತಿ ಬೇರೆ ಎಲ್ಲೂ ಕಾಣಸಿಗದು. ಸ್ವಾಮಿ ವಿವೇಕಾನಂದರ ಅಮೇರಿಕಾ ಪ್ರವಾಸದ ಬಳಿಕ ದೇಶದ ಮೌಲ್ಯಗಳು ವಿಶ್ವವ್ಯಾಪಿಯಾಯಿತು. ಇಂತಹ ಕಾರ್ಯಕ್ರಮದಲ್ಲಿ ಯುವ ಜನತೆ ಹೆಚ್ಚಾಗಿ ಪಾಲ್ಗೊಂಡು ನಮ್ಮ ಹಿರಿಯರು ಪಾಲಿಸಿಕೊಂಡ ಬಂದ ಆಚರಣೆಗಳು ಪದ್ದತಿಗಳನ್ನು ಉಳಿಸಿ ಬೆಳೆಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಪುತ್ತೂರು ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಕುಂಜಾಡಿ ಪ್ರಕಾಶ್ಚಂದ್ರ ರೈ ಮುಗೇರುಗುತ್ತು ಮಾತನಾಡಿ,  ಧರ್ಮದ ಹಾದಿಯಲ್ಲಿ ನಮ್ಮನ್ನು ತೊಡಗಿಸಿಕೊಂಡಾಗ ನೆಮ್ಮದಿಯ ಬದುಕು ಸಾಧ್ಯವಾಗುತ್ತದೆ. ಕ್ಷಣಿಕ ಸುಖಕ್ಕಿಂತಲೂ ಆತ್ಮ ಶುದ್ದಿಯಿಂದ ಮಾಡುವ ಕಾರ್ಯಗಳಿಂದ ಸಿಗುವ ಸುಖ ಶ್ರೇಷ್ಠವಾದದು ಎಂದರು.

Advertisement

ಜನಜಾಗೃತಿ ವೇದಿಕೆಯ ಸವಣೂರು ವಲಯಾಧ್ಯಕ್ಷ  ರಾಕೇಶ್ ರೈ ಕೆಡೆಂಜಿ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ  ತಾರಾನಾಥ ಕಾಯರ್ಗ, ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಕಾರ್ಯದರ್ಶಿ ಅಜಿತ್ ರೈ ಹೊಸಮನೆ , ಸವಣೂರು ಹಿಂ.ಜಾ.ವೇಯ ಕಾರ್ಯದರ್ಶಿ ಸಚಿನ್ ಕೋಟ್ಯಾನ್ ಮಡಕೆ ಉಪಸ್ಥಿತರಿದ್ದರು.
ಅರ್ಚಕ ಎಸ್.ಗೋಪಾಲಕೃಷ್ಣ ಬಡಕಿಲ್ಲಾಯ ಅವರ ನೇತೃತ್ವದಲ್ಲಿ ಸತ್ಯನಾರಾಯಣ ಪೂಜೆ ನಡೆಯಿತು. ಬಳಿಕ ಭಜನಾ ಕಾರ್ಯಕ್ರಮ ನಡೆಯಿತು.
ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಗಿರಿಶಂಕರ ಸುಲಾಯ ಪ್ರಸ್ತಾವಿಸಿದರು. ಅಧ್ಯಕ್ಷ ಜನಾರ್ಧನ  ಪಂಜ ಸ್ವಾಗತಿಸಿದರು. ಮಾಜಿ ಕಾರ್ಯದರ್ಶಿ ಜಗದೀಶ್ ಕೆಡೆಂಜಿ ವಂದಿಸಿದರು. ಪ್ರವೀಣ್ ಚೆನ್ನಾವರ ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಯೋಧ್ಯೆಗೆ ಹರಿದು ಬರುತ್ತಿರುವ ಭಕ್ತರ ದಂಡು | ರಾಮನ ದರ್ಶನ ಪಡೆದ 1.5 ಕೋಟಿ ಜನ – ಚಂಪತ್‌ ರಾಯ್‌
April 22, 2024
5:17 PM
by: The Rural Mirror ಸುದ್ದಿಜಾಲ
’ಬಸವನಮೂಲ’’ ಬಸವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಅತಿರುದ್ರ ಮಹಾಯಾಗ | ಮೇ 6 ರಂದು ಸಂಕಲ್ಪ ಆರಂಭ |
April 22, 2024
1:28 PM
by: ದ ರೂರಲ್ ಮಿರರ್.ಕಾಂ
500 ವರ್ಷದ ಬಳಿಕ ಅಯೋಧ್ಯೆಯಲ್ಲಿ ರಾಮನವಮಿ | ಬಾಲ ರಾಮನನ್ನು ಸ್ಪರ್ಶಿಸಿದ ಸೂರ್ಯ ತಿಲಕ | ರಾಮನನ್ನು ನೋಡಲು ಬರುತ್ತಿದೆ ಭಕ್ತರ ದಂಡು |
April 17, 2024
2:45 PM
by: The Rural Mirror ಸುದ್ದಿಜಾಲ
ಅಯೋಧ್ಯೆ ಬಾಲರಾಮನಿಗೆ ಮೊದಲ ರಾಮನವಮಿ | 19 ಗಂಟೆ ಭಕ್ತರಿಗೆ ದರ್ಶನ ಭಾಗ್ಯ, VIP ಗಳಿಗೆ ನೋ ಎಂಟ್ರಿ | ದೂರದರ್ಶನದಲ್ಲಿ ರಾಮ ನವಮಿ ಆಚರಣೆಯ ನೇರಪ್ರಸಾರ |
April 16, 2024
2:16 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror