ಹಿಂ ಜಾ ವೇ ವತಿಯಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

May 9, 2019
11:30 AM

ಸವಣೂರು : ಸವಣೂರು ಚಂದ್ರನಾಥ ಬಸದಿಯ ಪ್ರಿಯಕಾರಿಣಿ ಸಭಾಭವನದಲ್ಲಿ ಸವಣೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ  ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ ನಡೆಯಿತು.

ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಹಿಂದೂ ಮುಖಂಡ ರಾಜೇಶ್ ಶೆಟ್ಟಿ ಮೇನಾಲ ,ದೇಶದ ಆತ್ಮವೇ ಆಧ್ಯಾತ್ಮ . ದೇಶದಲ್ಲಿನ ಸಂಸ್ಕಾರ, ಸಂಸ್ಕೃತಿ ಬೇರೆ ಎಲ್ಲೂ ಕಾಣಸಿಗದು. ಸ್ವಾಮಿ ವಿವೇಕಾನಂದರ ಅಮೇರಿಕಾ ಪ್ರವಾಸದ ಬಳಿಕ ದೇಶದ ಮೌಲ್ಯಗಳು ವಿಶ್ವವ್ಯಾಪಿಯಾಯಿತು. ಇಂತಹ ಕಾರ್ಯಕ್ರಮದಲ್ಲಿ ಯುವ ಜನತೆ ಹೆಚ್ಚಾಗಿ ಪಾಲ್ಗೊಂಡು ನಮ್ಮ ಹಿರಿಯರು ಪಾಲಿಸಿಕೊಂಡ ಬಂದ ಆಚರಣೆಗಳು ಪದ್ದತಿಗಳನ್ನು ಉಳಿಸಿ ಬೆಳೆಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಪುತ್ತೂರು ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಕುಂಜಾಡಿ ಪ್ರಕಾಶ್ಚಂದ್ರ ರೈ ಮುಗೇರುಗುತ್ತು ಮಾತನಾಡಿ,  ಧರ್ಮದ ಹಾದಿಯಲ್ಲಿ ನಮ್ಮನ್ನು ತೊಡಗಿಸಿಕೊಂಡಾಗ ನೆಮ್ಮದಿಯ ಬದುಕು ಸಾಧ್ಯವಾಗುತ್ತದೆ. ಕ್ಷಣಿಕ ಸುಖಕ್ಕಿಂತಲೂ ಆತ್ಮ ಶುದ್ದಿಯಿಂದ ಮಾಡುವ ಕಾರ್ಯಗಳಿಂದ ಸಿಗುವ ಸುಖ ಶ್ರೇಷ್ಠವಾದದು ಎಂದರು.

ಜನಜಾಗೃತಿ ವೇದಿಕೆಯ ಸವಣೂರು ವಲಯಾಧ್ಯಕ್ಷ  ರಾಕೇಶ್ ರೈ ಕೆಡೆಂಜಿ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ  ತಾರಾನಾಥ ಕಾಯರ್ಗ, ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಕಾರ್ಯದರ್ಶಿ ಅಜಿತ್ ರೈ ಹೊಸಮನೆ , ಸವಣೂರು ಹಿಂ.ಜಾ.ವೇಯ ಕಾರ್ಯದರ್ಶಿ ಸಚಿನ್ ಕೋಟ್ಯಾನ್ ಮಡಕೆ ಉಪಸ್ಥಿತರಿದ್ದರು.
ಅರ್ಚಕ ಎಸ್.ಗೋಪಾಲಕೃಷ್ಣ ಬಡಕಿಲ್ಲಾಯ ಅವರ ನೇತೃತ್ವದಲ್ಲಿ ಸತ್ಯನಾರಾಯಣ ಪೂಜೆ ನಡೆಯಿತು. ಬಳಿಕ ಭಜನಾ ಕಾರ್ಯಕ್ರಮ ನಡೆಯಿತು.
ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಗಿರಿಶಂಕರ ಸುಲಾಯ ಪ್ರಸ್ತಾವಿಸಿದರು. ಅಧ್ಯಕ್ಷ ಜನಾರ್ಧನ  ಪಂಜ ಸ್ವಾಗತಿಸಿದರು. ಮಾಜಿ ಕಾರ್ಯದರ್ಶಿ ಜಗದೀಶ್ ಕೆಡೆಂಜಿ ವಂದಿಸಿದರು. ಪ್ರವೀಣ್ ಚೆನ್ನಾವರ ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ
June 22, 2026
2:01 PM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ಭಕ್ತಸಾಗರ – ರಸ್ತೆಗಳಲ್ಲಿ ವಾಹನ ದಟ್ಟಣೆ
June 21, 2026
2:52 PM
by: ದ ರೂರಲ್ ಮಿರರ್.ಕಾಂ
“ಅನ್ನವೇ ಪರಮಾತ್ಮ” ಸಂದೇಶದೊಂದಿಗೆ ಗೋಕರ್ಣದಲ್ಲಿ ಈ ಬಾರಿ ರಾಘವೇಶ್ವರ ಶ್ರೀಗಳಿಂದ ‘ಅನ್ನಬ್ರಹ್ಮ ಚಾತುರ್ಮಾಸ್ಯ’
June 20, 2026
7:10 AM
by: ದ ರೂರಲ್ ಮಿರರ್.ಕಾಂ
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?
June 7, 2026
7:32 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror