ಹಿತಮಿತ ಆಹಾರ ಸೇವನೆಯಿಂದ ಆರೋಗ್ಯ : ಡಾ.ಶಶಿಧರ ಹಾಸನಡ್ಕ

July 23, 2019
9:00 AM

ಸುಳ್ಯ : ಅತಿಯಾಗಿ ತಿಂದರೆ ಆರೋಗ್ಯ ಕೆಡುತ್ತದೆ. ಈ ಬಗ್ಗೆ ಗಮನ ಕೊಡದ ಕಾರಣ ಯುವ ಜನತೆಯ ಆರೋಗ್ಯ ಮಟ್ಟ ಕುಸಿಯುತ್ತಿದೆ. ಆರೋಗ್ಯ ಹಾಳಾದ ಮೇಲೆ ಗಮನ ಕೊಡುವುದಕ್ಕಿಂತ ಮುಂಜಾಗರೂಕತೆ ಮೂಲಕ ಕಟ್ಟುನಿಟ್ಟಿನ ಆಹಾರ ಪದ್ಧತಿಗೆ ಒಗ್ಗಿಕೊಳ್ಳಬೇಕೆಂದು ಹಾಸನಡ್ಕ ಆರೋಗ್ಯಧಾಮದ ಡಾ.ಶಶಿಧರ ಹಾಸನಡ್ಕ ಹೇಳಿದರು.

ಅವರು ಶ್ರೀ ಗುರು ರಾಘವೇಂದ್ರ ಮಠದಲ್ಲಿ ಸುಳ್ಯ ತಾಲೂಕು ಶಿವಳ್ಳಿ ಸಂಪನ್ನ ಆಯೋಜಿಸಿದ ತಿಂಡಿ ಮೇಳ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಆಹಾರದ ಬಗ್ಗೆ ಉಪನ್ಯಾಸ ನೀಡಿ, ದೇಹದ ಪ್ರಕೃತಿಗನುಗುಣವಾಗಿ ಆಹಾರ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕೆಂದರು. ಪಾಕತಜ್ಞ ಪಿ.ಎಸ್.ನಾರಾಯಣ ಕೆದಿಲಾಯ ಅವರನ್ನು ಸಮ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಘಟಕದ ವತಿಯಿಂದ ಕಾಲುದೀಪ ಮತ್ತು ಆರತಿ ತಟ್ಟೆಯನ್ನು ಶ್ರೀರಾಘವೇಂದ್ರ ಮಠಕ್ಕೆ ಕೊಡುಗೆಯಾಗಿ ನೀಡಲಾಯಿತು.
ಸಭಾಧ್ಯಕ್ಷತೆಯನ್ನು ಶಿವಳ್ಳಿ ಸಂಪನ್ನದ ಅಧ್ಯಕ್ಷ ಮುರಳೀಕೃಷ್ಣ ಕಣ್ಣರಾಯ ವಹಿಸಿದ್ದರು. ವೇದಿಕೆಯಲ್ಲಿ ಬೃಂದಾವನ ಸೇವಾ ಟ್ರಸ್ಟ್ ನ ಅಧ್ಯಕ್ಷ ಎಂ.ಎನ್.ಶ್ರೀಕೃಷ್ಣ ಉಪಸ್ಥಿತರಿದ್ದರು.
ಗೌರವಾಧ್ಯಕ್ಷ ರಮೇಶ ಸೋಮಯಾಗಿ, ಸಂಘಟನಾ ಕಾರ್ಯದರ್ಶಿ ಗಿರೀಶ್ ಕೇಕುಣ್ಣಾಯ, ಕಾರ್ಯದರ್ಶಿ ರಾಮಕುಮಾರ್ ಹೆಬ್ಬಾರ್, ಕೋಶಾಧಿಕಾರಿ ಶಶಿಧರ ಕೇಕುಣ್ಣಾಯ, ಯುವ ಘಟಕ ಅಧ್ಯಕ್ಷ ಪ್ರಥಮ್ ಮೂಡಿತ್ತಾಯ, ಕಾರ್ಯದರ್ಶಿ ಅರ್ಜುನ್ ಆಚಾರ್ ಸಹಕರಿಸಿದರು.
ಪೂರ್ವಾಧ್ಯಕ್ಷ ಪ್ರಕಾಶ್ ಮೂಡಿತ್ತಾಯ ಮತ್ತು ಮಹಿಳಾ ಘಟಕದ ಅಧ್ಯಕ್ಷೆ ಮಮತಾ ಮೂಡಿತ್ತಾಯ ನಿರೂಪಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror