ಹೊಸಮೂಲೆಯವರ ‘ತುಳುವರ ಸಂಗ್ರಾಮ’ ಕೃತಿ ಬಿಡುಗಡೆ

November 30, 2019
6:42 PM

ಪುತ್ತೂರು: ಇನ್ನರ್ ವ್ಹೀಲ್ ಕ್ಲಬ್ ಓಫ್ ಪುತ್ತೂರು ಇದರ ಆಶ್ರಯದಲ್ಲಿ ಶ್ಯಾಮ ಸುದರ್ಶನ್ ಹೊಸಮೂಲೆ ಇವರ ‘ತುಳುವರ ಸಂಗ್ರಾಮ’ – ಇದು ಕರಾವಳಿಯ ಸ್ವಾತಂತ್ರ್ಯ ಹೋರಾಟದ ಹೆಜ್ಜೆ ಗುರುತು’ ಎಂಬ ಕೃತಿ ಬಿಡುಗಡೆ ಸಮಾರಂಭ ಕಾರ್ಯಕ್ರಮವು ಇಂದು ಪುತ್ತೂರು ರೋಟರಿ ಟ್ರಸ್ಟ್ ಹಾಲ್ ಇಲ್ಲಿ ನಡೆಯಿತು.

ಪುಸ್ತಕವನ್ನು ಹಿರಿಯ ಸಾಹಿತಿಗಳಾದ ಡಾ.ಬಿ. ಪ್ರಭಾಕರ್ ಶಿಶಿಲ ಇವರು ಬಿಡುಗಡೆಗೊಳಿಸಿದರು. ಬಿಡುಗಡೆಗೊಳಿಸಿ ಮಾತುನಾಡಿದ ಅವರು ಇವತ್ತು ನಮ್ಮ ನಾಡಿನ ಇತಿಹಾಸದ ಬಗ್ಗೆ ಅಧ್ಯಯನ ಮಾಡಬೇಕಾದ ಅನಿರ್ವಾಯತೆ ಇದೆ. ಆದರೆ, ಇಂದು ಶ್ಯಾಮ ಸುದರ್ಶನ ಈ ಕೃತಿ ಒಂದು ಒಳ್ಳೆಯ ಪ್ರಯತ್ನ, ಇದಕ್ಕೆ ಇನ್ನರ್ ವ್ಹೀಲ್ ನೀಡಿದ ಬೆಂಬಲ ನಿಜಕ್ಕೂ ಶ್ಲಾಘನೀಯ. ಇಲ್ಲಿ ಹೋರಾಟ ಮಾಡಿದವರು ಅನೇಕರು ಅದರಲ್ಲೂ, ನಾರಣಪ್ಪ ಅವರಂತಹವರನ್ನು ದರೋಡೆಕೋರರು ಎಂಬುದು ದುರಂತ ಎಂದರು.

ಖ್ಯಾತ ವಾಗ್ಮಿಗಳಾದ ಶ್ರೀಕೃಷ್ಣ ಉಪಾಧ್ಯಾಯ ಕೃತಿಯ ಬಗ್ಗೆ ಪರಿಚಯಿಸಿದರು. ಮುಖ್ಯ ಅತಿಥಿಗಳಾಗಿ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಸಂಶುದ್ದೀನ್ ಸಂಪ್ಯ, ಖ್ಯಾತ ನ್ಯಾಯವಾದಿಗಳಾದ ಮಹೇಶ್ ಕಜೆ, ಇನ್ನರ್ ವ್ಹೀಲ್ ಅಧ್ಯಕ್ಷೆ ಸಹನಾ ಭವಿನ್, ಇನ್ನರ್ ವ್ಹೀಲ್ ಕಾರ್ಯದರ್ಶಿ ವಿಜಯಲಕ್ಷ್ಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisement

ಕೃತಿಕಾರ ಶ್ಯಾಮ ಸುದರ್ಶನ ಹೊಸಮೂಲೆ ಪ್ರಾಸ್ತಾವಿಕ ಮಾತನಾಡಿದರು. ಸುಕ್ಷಿತಾ ರಾವ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜ.26 | ಸಾರಡ್ಕದಲ್ಲಿ ಕೃಷಿ ಹಬ್ಬ | ವಿವಿಧ ಗೋಷ್ಠಿಗಳು |
January 25, 2025
5:01 PM
by: ದ ರೂರಲ್ ಮಿರರ್.ಕಾಂ
ಮಂಗಳೂರು | ಕದ್ರಿ ಉದ್ಯಾನದಲ್ಲಿ ಜ.23 ರಿಂದ  ಫಲಪುಷ್ಪ ಪ್ರದರ್ಶನ | 20 ಸಾವಿರಕ್ಕೂ ಅಧಿಕ ಹೂವಿನ ಗಿಡಗಳ ಪ್ರದರ್ಶನ |
January 11, 2025
7:18 AM
by: The Rural Mirror ಸುದ್ದಿಜಾಲ
ಡಿ. 29 | ಕುಂಬಳೆಯಲ್ಲಿ ಕಲಾವಿದ ಕುಂಬಳೆ ಶ್ರೀಧರ ರಾವ್ ಸ್ಮೃತಿ | ‘ಕಲಾ ಶ್ರೀಧರ’ ಕೃತಿ ಅನಾವರಣ |
December 26, 2024
11:28 AM
by: ದ ರೂರಲ್ ಮಿರರ್.ಕಾಂ
ನ.2 ರಿಂದ ಕಲರವ | ಹಕ್ಕಿ-ವನ್ಯ ಜೀವಿ – ಪಕೃತಿ ಛಾಯಾಚಿತ್ರ ಪ್ರದರ್ಶನ |
October 23, 2024
8:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror