ಹೊಸ್ಕೇರಿಯಲ್ಲಿ ಕಾಡಾನೆ ದಾಳಿ : ವ್ಯಕ್ತಿಗೆ ಗಂಭೀರ ಗಾಯ

October 16, 2019
9:00 AM

ಮಡಿಕೇರಿ :ಕಾಡಾನೆ ದಾಳಿಗೆ ವ್ಯಕ್ತಿಯೊರ್ವ ಗಾಯಗೊಂಡ ಘಟನೆ ಮೇಕೂರು ಹೊಸ್ಕೇರಿ ಗ್ರಾಮದಲ್ಲಿ ನಡೆದಿದೆ.

ಬಾಡಗ ಬಾಣಂಗಾಲ ಗ್ರಾಮದ ನಿವಾಸಿ ಪೆರುಮಾಳ್ (60) ಮೇಕೂರು ಹೊಸ್ಕೇರಿ ಗ್ರಾಮದ ಮಾದಯ್ಯ ಎಂಬುವವರ ಕಾಫಿ ತೋಟದಲ್ಲಿ ಕೆಸಲ ಮಾಡುತ್ತಿದ್ದ ವೇಳೆ ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದೆ. ಬಳಿಕ ಕಾಡಾನೆಯು ಪೆರುಮಾಳ್ ಅನ್ನು ಸೊಂಡಿಲಿನಿಂದ ಎತ್ತಿ ಎಸೆದಿದ್ದು, ಪರಿಣಾಮ ಪೆರುಮಾಳ್ ಸೊಂಟ ಹಾಗೂ ಕಾಲಿಗೆ ಗಂಭೀರ ಗಾಯವಾಗಿದೆ. ಕೂಡಲೇ ಗಾಯಾಳು ಪೆರುಮಾಳ್ ಅನ್ನು ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ತಿತಿಮತಿ ಉಪ ವಲಯ ಅರಣ್ಯಾಧಿಕಾರಿ ಶ್ರೀನಿವಾಸ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು
August 2, 2026
8:39 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?
August 2, 2026
6:59 PM
by: ಸಾಯಿಶೇಖರ್ ಕರಿಕಳ
ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ
August 2, 2026
7:24 AM
by: ದ ರೂರಲ್ ಮಿರರ್.ಕಾಂ
ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ
August 2, 2026
7:14 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror