ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಮನೆ,ಕಚೇರಿ ಸೇರಿದಂತೆ 15 ಕ್ಕೂ ಹೆಚ್ಚು ಕಡೆಗಳಲ್ಲಿ ಸಿಬಿಐ ದಾಳಿ

October 5, 2020
10:48 AM

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಗೆ ಸಿಬಿಐ ಬಿಗ್ ಶಾಕ್ ನೀಡಿದ್ದು, ಇಂದು ಬೆಳ್ಳಂಬೆಳಗ್ಗೆ ಡಿ.ಕೆ.ಶಿವಕುಮಾರ್ ಮತ್ತು ಡಿ ಕೆ ಸುರೇಶ್ ಅವರ ಮನೆ, ಕಚೇರಿ ಸೇರಿದಂತೆ ವಿವಿಧ ಕಡೆಗಳಲ್ಲಿ ಸಿಬಿಐ ದಾಳಿ ಮಾಡಿದೆ.

ಸೋಮವಾರ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ದೊಡ್ಡ ಆಲದಹಳ್ಳಿಯಲ್ಲಿರುವ ನಿವಾಸದ ಮೇಲೆಯೂ ದಾಳಿಯನ್ನು ನಡೆಸಲಾಗಿದೆ. 7 ಸಿಬಿಐ ಅಧಿಕಾರಿಗಳು ಇನ್ನೋವಾ ಕಾರಿನಲ್ಲಿ ಕನಕಪುರದ ನಿವಾಸಕ್ಕೆ ಆಗಮಿಸಿದ್ದಾರೆ. ಡಿ. ಕೆ. ಶಿವಕುಮಾರ್ ಸದಾಶಿವನಗರ ನಿವಾಸ, ಕನಕಪುರ ನಿವಾಸ ಮತ್ತು ಡಿ. ಕೆ. ಸುರೇಶ್ ನಿವಾಸದ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಸದಾಶಿವನಗರ ನಿವಾಸದಲ್ಲಿ ಐವರು ಸಿಬಿಐ ಅಧಿಕಾರಿಗಳು ಇದ್ದಾರೆ.ಅಕ್ರಮ ಆಸ್ತಿ ಗಳಿಕೆಯಲ್ಲಿ ಎಫ್ ಐಆರ್ ದಾಖಲಾಗಿದೆ.ಆದಾಯ ಮೀರಿ ಆಸ್ತಿ ಗಳಿಕೆ ಸಂಬಂಧ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ದೂರು ದಾಖಲಿಸಲಾಗಿದೆ.

 

 

ಕಾಂಗ್ರೆಸ್‌ ಟೀಕೆ
ಕೆಪಿಸಿಸಿ ಅಧ್ಯಕ್ಷರ ಮನೆಗೆ ದಾಳಿ ನಡೆಸಿದ್ದನ್ನು ಕಾಂಗ್ರೆಸ್ ನಾಯಕರು  ಖಂಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಹಲವು ನಾಯಕರು, ಈ ದಾಳಿ ಬಿಜೆಪಿ ಸರ್ಕಾರದ ಪ್ರತೀಕಾರದ ರಾಜಕೀಯ ಎಂದು ಟೀಕಿಸಿದ್ದಾರೆ.ಡಿ ಕೆ ಶಿವಕುಮಾರ್ ಮನೆ ಮೇಲೆ ನರೇಂದ್ರ ಮೋದಿ ಸರ್ಕಾರ ನಡೆಸಿರುವ ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ. ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ ಬಿಜೆಪಿ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ
August 12, 2026
8:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror