ಸವಣೂರು : ಪ್ರಾಥಮಿಕ ಆರೋಗ್ಯ ಕೇಂದ್ರ ಕೊಳ್ತಿಗೆ ಹಾಗೂ ಅಂಕತ್ತಡ್ಕ ಅಂಗನವಾಡಿ ಕೇಂದ್ರದ ಸಹಯೋಗದೊಂದಿಗೆ ಪೌಷ್ಟಿಕ ಆಹಾರ ಸಪ್ತಾಹ ಹಾಗೂ ಪೋಷಣ್ ಅಭಿಯಾಣ ಕಾರ್ಯಕ್ರಮವು ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪಾಲ್ತಾಡಿ ಶಾಖೆಯ ನವೋದಯ ಸಭಾಂಗಣದಲ್ಲಿ ನಡೆಯಿತು.
ಪಾಲ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾ„ಕಾರಿ ದೀಪಕ್ ರೈ ಕಾರ್ಯಕ್ರಮ ಉದ್ಘಾಟಿಸಿ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು.ಬಾಲವಿಕಾಸ ಸಮಿತಿಯ ಅಧ್ಯಕ್ಷೆ ,ಸವಣೂರು ಗ್ರಾ.ಪಂ.ಸದಸ್ಯೆ ಜಯಂತಿ ಮಡಿವಾಳ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪಾಲ್ತಾಡಿ ಶಾಖಾ ವ್ಯವಸ್ಥಾಪಕರಾದ ಜಯರಾಮ ಕೆ, ಅಂಕತ್ತಡ್ಕ ಪ್ರಾಥಮಿಕ ಶಾಲೆಯ ಶಿಕ್ಷಕಿ ವಸಂತಿ, ನಿವೃತ್ತ ಮುಖ್ಯ ಶಿಕ್ಷಕಿ ಪಾರ್ವತಿ ಉಪಸ್ಥಿತರಿದ್ದರು.
ಅಂಗನವಾಡಿ ಮಕ್ಕಳು ಪ್ರಾರ್ಥಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರ ಕೊಳ್ತಿಗೆಯ ಆರೋಗ್ಯ ಸಹಾಯಕಿ ಅಕ್ಷತಾ ಸ್ವಾಗತಿಸಿದರು. ಆಶಾಕಾರ್ಯಕರ್ತೆ ಶ್ಯಾಮಲ ರೈ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು. ಅಂಗನವಾಡಿ ಕಾರ್ಯಕರ್ತೆ ಪ್ರೇಮ ಹಾಗೂ ಆಶಾಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಸಹಕರಿಸಿದರು. ಕೊನೆಯದಾಗಿ ವಿವಿಧ ಪೌಷ್ಟಿಕ ಆಹಾರಗಳ ತಿನಿಸುಗಳ ಪ್ರಾತ್ಯಕ್ಷಿಕೆ ನಡೆಯಿತು.
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…
ಡ್ರ್ಯಾಗನ್ ಫ್ರೂಟ್ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…
ಪ್ರತಿಯೊಂದು ಮಾತಿಗೂ ತಕ್ಷಣ ಪ್ರತಿಕ್ರಿಯಿಸುವ ಅಗತ್ಯವಿಲ್ಲ. ಕೆಲವೊಮ್ಮೆ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಮೌನವೇ ಉತ್ತಮ…
ಭಾರತದ ಎಮ್ಮೆ ಮಾಂಸ ರಫ್ತು 2025-26ರಲ್ಲಿ 5.1 ಬಿಲಿಯನ್ ಡಾಲರ್ ತಲುಪಿದ್ದು, 2026-27ರಲ್ಲಿ…