ಅಂಗಾರರನ್ನು ಸಚಿವ ಸಂಪುಟದಿಂದ ಹೊರಗಿಡಲು ಸಂಚು ನಡೆದಿದೆ – ಜೆಡಿಎಸ್

August 20, 2019
2:22 PM

ಸುಳ್ಯ: ಆರು ಬಾರಿ ಗೆದ್ದು ವಿಧಾನಸಭೆ ಪ್ರವೇಶಿಸಿದ ನಿಷ್ಠಾವಂತ ಶಾಸಕ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ತಪ್ಪಿಸಲು ಸಂಚು ನಡೆದಿದೆ ಎಂದು ಜೆಡಿಎಸ್ ಹೇಳಿದೆ.

Advertisement
Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ ಅಸಮರ್ಪಕ ಮತ್ತು ಅಸಂತುಲಿತ ಮತ್ತು ರಾಜ್ಯದ ಬಗ್ಗೆ ಕಾಳಜಿಯೇ ಇಲ್ಲದ ಸಚಿವ ಸಂಪುಟ ಇದಾಗಿದೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು ಸೇರಿ ಬಹುತೇಕ ಜಿಲ್ಲೆಗಳಲ್ಲಿ ಸಚಿವರೇ ಇಲ್ಲ. ಶಿಕ್ಷಣ, ಬ್ಯಾಂಕಿಂಗ್, ಆರೋಗ್ಯ ಸೇರಿ ಬೆಳವಣಿಗೆಯ ಉತ್ತುಂಗದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಒಬ್ಬ ಸಚಿವರನ್ನು ನೀಡದೆ ಕಡೆಗಣಿಸಿದೆ. ಸಚಿವರಿಲ್ಲದೆ ಇರುವುದು ಜಿಲ್ಲೆಯ ಅಭಿವೃದ್ಧಿಗೆ ಹಿನ್ನಡೆಯಾಗಲಿದೆ. ಈ ರೀತಿ ಕೆಲವೇ ಕೆಲವು ಜಿಲ್ಲೆಗಳಿಗೆ ಮಾತ್ರ ಸಚಿರನ್ನು ನೀಡಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದರು. ಅಂಗಾರರನ್ನು ಸಚಿವರನ್ನು ಮಾಡಿದರೆ ಸಾಕಷ್ಟು ಅನುದಾನ ಬಂದು ಸುಳ್ಯ ಕ್ಷೇತ್ರ ಉತ್ತಮ ಬೆಳವಣಿಗೆ ಮಾಡುವ ಅವಕಾಶ ಇತ್ತು. ಆದರೆ ಅವರನ್ನು ಕಡೆಗಣಿಸಿ ಇಡೀ ಕ್ಷೇತ್ರದ ಜನರನ್ನು, ಕಾರ್ಯಕರ್ತರನ್ನು ಬಿಜೆಪಿ ಅವಮಾನಿಸಿದೆ. ಅಂಗಾರರ ತತ್ವ, ಸಿದ್ಧಾಂತಕ್ಕೆ ಬೆಲೆ ಇಲ್ಲವೇ ಎಂದು ಪ್ರಶ್ನಿಸಿದ ಅವರು ರಾಜಕೀಯ ಭಿನ್ನಾಭಿಪ್ರಾಯ ಇದ್ದರೂ ಅದನ್ನು ಬದಿಗಿಟ್ಟು ಸುಳ್ಯ ಕ್ಷೇತ್ರಕ್ಕೆ ಆಗಿರುವ ಅನ್ಯಾಯದ ವಿರುದ್ಧ ಮತ್ತು ಕ್ಷೇತ್ರದ ಅಭ್ಯುದಯದ ದೃಷ್ಟಿಯಿಂದ ಹೋರಾಟ ನಡೆಸಲು ಸಿದ್ಧರಿದ್ದೇವೆ ಎಂದರು. ದಕ್ಷಿಣ ಕನ್ನಡ ಜಿಲ್ಲೆಗೆ ಆಗಿರುವ ಈ ಅನ್ಯಾಯದ ವಿರುದ್ಧ ಜಿಲ್ಲೆಯ ಮುಖಂಡರಾದ ಡಿ.ವಿ.ಸದಾನಂದ ಗೌಡ, ಶೋಭಾ ಕರಂದ್ಲಾಜೆ ಧ್ವನಿ ಎತ್ತಲಿ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಸುಳ್ಯ ಕ್ಷೇತ್ರದ ಅಧ್ಯಕ್ಷ ದಯಾಕರ ಆಳ್ವ, ಪ್ರಧಾನ ಕಾರ್ಯದರ್ಶಿ ರಾಕೇಶ್ ಕುಂಠಿಕಾನ ಉಪಸ್ಥಿತರಿದ್ದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror