ಸುದ್ದಿಗಳು

ಅಂಗಾರರನ್ನು ಸಚಿವ ಸಂಪುಟದಿಂದ ಹೊರಗಿಡಲು ಸಂಚು ನಡೆದಿದೆ – ಜೆಡಿಎಸ್

Share

ಸುಳ್ಯ: ಆರು ಬಾರಿ ಗೆದ್ದು ವಿಧಾನಸಭೆ ಪ್ರವೇಶಿಸಿದ ನಿಷ್ಠಾವಂತ ಶಾಸಕ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ತಪ್ಪಿಸಲು ಸಂಚು ನಡೆದಿದೆ ಎಂದು ಜೆಡಿಎಸ್ ಹೇಳಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ ಅಸಮರ್ಪಕ ಮತ್ತು ಅಸಂತುಲಿತ ಮತ್ತು ರಾಜ್ಯದ ಬಗ್ಗೆ ಕಾಳಜಿಯೇ ಇಲ್ಲದ ಸಚಿವ ಸಂಪುಟ ಇದಾಗಿದೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು ಸೇರಿ ಬಹುತೇಕ ಜಿಲ್ಲೆಗಳಲ್ಲಿ ಸಚಿವರೇ ಇಲ್ಲ. ಶಿಕ್ಷಣ, ಬ್ಯಾಂಕಿಂಗ್, ಆರೋಗ್ಯ ಸೇರಿ ಬೆಳವಣಿಗೆಯ ಉತ್ತುಂಗದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಒಬ್ಬ ಸಚಿವರನ್ನು ನೀಡದೆ ಕಡೆಗಣಿಸಿದೆ. ಸಚಿವರಿಲ್ಲದೆ ಇರುವುದು ಜಿಲ್ಲೆಯ ಅಭಿವೃದ್ಧಿಗೆ ಹಿನ್ನಡೆಯಾಗಲಿದೆ. ಈ ರೀತಿ ಕೆಲವೇ ಕೆಲವು ಜಿಲ್ಲೆಗಳಿಗೆ ಮಾತ್ರ ಸಚಿರನ್ನು ನೀಡಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದರು. ಅಂಗಾರರನ್ನು ಸಚಿವರನ್ನು ಮಾಡಿದರೆ ಸಾಕಷ್ಟು ಅನುದಾನ ಬಂದು ಸುಳ್ಯ ಕ್ಷೇತ್ರ ಉತ್ತಮ ಬೆಳವಣಿಗೆ ಮಾಡುವ ಅವಕಾಶ ಇತ್ತು. ಆದರೆ ಅವರನ್ನು ಕಡೆಗಣಿಸಿ ಇಡೀ ಕ್ಷೇತ್ರದ ಜನರನ್ನು, ಕಾರ್ಯಕರ್ತರನ್ನು ಬಿಜೆಪಿ ಅವಮಾನಿಸಿದೆ. ಅಂಗಾರರ ತತ್ವ, ಸಿದ್ಧಾಂತಕ್ಕೆ ಬೆಲೆ ಇಲ್ಲವೇ ಎಂದು ಪ್ರಶ್ನಿಸಿದ ಅವರು ರಾಜಕೀಯ ಭಿನ್ನಾಭಿಪ್ರಾಯ ಇದ್ದರೂ ಅದನ್ನು ಬದಿಗಿಟ್ಟು ಸುಳ್ಯ ಕ್ಷೇತ್ರಕ್ಕೆ ಆಗಿರುವ ಅನ್ಯಾಯದ ವಿರುದ್ಧ ಮತ್ತು ಕ್ಷೇತ್ರದ ಅಭ್ಯುದಯದ ದೃಷ್ಟಿಯಿಂದ ಹೋರಾಟ ನಡೆಸಲು ಸಿದ್ಧರಿದ್ದೇವೆ ಎಂದರು. ದಕ್ಷಿಣ ಕನ್ನಡ ಜಿಲ್ಲೆಗೆ ಆಗಿರುವ ಈ ಅನ್ಯಾಯದ ವಿರುದ್ಧ ಜಿಲ್ಲೆಯ ಮುಖಂಡರಾದ ಡಿ.ವಿ.ಸದಾನಂದ ಗೌಡ, ಶೋಭಾ ಕರಂದ್ಲಾಜೆ ಧ್ವನಿ ಎತ್ತಲಿ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಸುಳ್ಯ ಕ್ಷೇತ್ರದ ಅಧ್ಯಕ್ಷ ದಯಾಕರ ಆಳ್ವ, ಪ್ರಧಾನ ಕಾರ್ಯದರ್ಶಿ ರಾಕೇಶ್ ಕುಂಠಿಕಾನ ಉಪಸ್ಥಿತರಿದ್ದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣ |

ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ…

11 hours ago

ಅಂತರಂಗ | ಸ್ವಾರ್ಥರಹಿತ ಬೇಡಿಕೆಗಳಿಗೆ ರಾಜಕೀಯದಲ್ಲಿ ಮಾನ್ಯತೆಯಿಲ್ಲ…!

ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…

15 hours ago

ಬದುಕು ಪುರಾಣ | ಎಲ್ಲರೊಳಗೂ ‘ಕುಂಭಕರ್ಣ’ನಿದ್ದಾನೆ!

ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…

15 hours ago

ದಾವಣಗೆರೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ | ಬಾಡಿಗೆ ಆಧಾರದಲ್ಲಿ ಖಾಸಗಿ ಕೊಳವೆಬಾವಿ

ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…

15 hours ago

ಯಾದಗಿರಿ ಜಿಲ್ಲೆಗೆ ತಾಪಮಾನ ಎಚ್ಚರಿಕೆ | ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ತಾಪಮಾನ ದಾಖಲಾಗುವ ಸಾಧ್ಯತೆ

ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…

15 hours ago

ಏಪ್ರಿಲ್ 30 ರವರೆಗೆ ಜೋಗ ಜಲಪಾತಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…

15 hours ago