ಸುಳ್ಯ: ಆರು ಬಾರಿ ಗೆದ್ದು ವಿಧಾನಸಭೆ ಪ್ರವೇಶಿಸಿದ ನಿಷ್ಠಾವಂತ ಶಾಸಕ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ತಪ್ಪಿಸಲು ಸಂಚು ನಡೆದಿದೆ ಎಂದು ಜೆಡಿಎಸ್ ಹೇಳಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ ಅಸಮರ್ಪಕ ಮತ್ತು ಅಸಂತುಲಿತ ಮತ್ತು ರಾಜ್ಯದ ಬಗ್ಗೆ ಕಾಳಜಿಯೇ ಇಲ್ಲದ ಸಚಿವ ಸಂಪುಟ ಇದಾಗಿದೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು ಸೇರಿ ಬಹುತೇಕ ಜಿಲ್ಲೆಗಳಲ್ಲಿ ಸಚಿವರೇ ಇಲ್ಲ. ಶಿಕ್ಷಣ, ಬ್ಯಾಂಕಿಂಗ್, ಆರೋಗ್ಯ ಸೇರಿ ಬೆಳವಣಿಗೆಯ ಉತ್ತುಂಗದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಒಬ್ಬ ಸಚಿವರನ್ನು ನೀಡದೆ ಕಡೆಗಣಿಸಿದೆ. ಸಚಿವರಿಲ್ಲದೆ ಇರುವುದು ಜಿಲ್ಲೆಯ ಅಭಿವೃದ್ಧಿಗೆ ಹಿನ್ನಡೆಯಾಗಲಿದೆ. ಈ ರೀತಿ ಕೆಲವೇ ಕೆಲವು ಜಿಲ್ಲೆಗಳಿಗೆ ಮಾತ್ರ ಸಚಿರನ್ನು ನೀಡಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದರು. ಅಂಗಾರರನ್ನು ಸಚಿವರನ್ನು ಮಾಡಿದರೆ ಸಾಕಷ್ಟು ಅನುದಾನ ಬಂದು ಸುಳ್ಯ ಕ್ಷೇತ್ರ ಉತ್ತಮ ಬೆಳವಣಿಗೆ ಮಾಡುವ ಅವಕಾಶ ಇತ್ತು. ಆದರೆ ಅವರನ್ನು ಕಡೆಗಣಿಸಿ ಇಡೀ ಕ್ಷೇತ್ರದ ಜನರನ್ನು, ಕಾರ್ಯಕರ್ತರನ್ನು ಬಿಜೆಪಿ ಅವಮಾನಿಸಿದೆ. ಅಂಗಾರರ ತತ್ವ, ಸಿದ್ಧಾಂತಕ್ಕೆ ಬೆಲೆ ಇಲ್ಲವೇ ಎಂದು ಪ್ರಶ್ನಿಸಿದ ಅವರು ರಾಜಕೀಯ ಭಿನ್ನಾಭಿಪ್ರಾಯ ಇದ್ದರೂ ಅದನ್ನು ಬದಿಗಿಟ್ಟು ಸುಳ್ಯ ಕ್ಷೇತ್ರಕ್ಕೆ ಆಗಿರುವ ಅನ್ಯಾಯದ ವಿರುದ್ಧ ಮತ್ತು ಕ್ಷೇತ್ರದ ಅಭ್ಯುದಯದ ದೃಷ್ಟಿಯಿಂದ ಹೋರಾಟ ನಡೆಸಲು ಸಿದ್ಧರಿದ್ದೇವೆ ಎಂದರು. ದಕ್ಷಿಣ ಕನ್ನಡ ಜಿಲ್ಲೆಗೆ ಆಗಿರುವ ಈ ಅನ್ಯಾಯದ ವಿರುದ್ಧ ಜಿಲ್ಲೆಯ ಮುಖಂಡರಾದ ಡಿ.ವಿ.ಸದಾನಂದ ಗೌಡ, ಶೋಭಾ ಕರಂದ್ಲಾಜೆ ಧ್ವನಿ ಎತ್ತಲಿ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಸುಳ್ಯ ಕ್ಷೇತ್ರದ ಅಧ್ಯಕ್ಷ ದಯಾಕರ ಆಳ್ವ, ಪ್ರಧಾನ ಕಾರ್ಯದರ್ಶಿ ರಾಕೇಶ್ ಕುಂಠಿಕಾನ ಉಪಸ್ಥಿತರಿದ್ದರು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…