Advertisement
Political mirror

ಅಂಗಾರರಿಗೆ ಸಚಿವ ಸ್ಥಾನವಿಲ್ಲ- ಸುಳ್ಯಕ್ಕೆ ಮತ್ತೆ ನಿರಾಸೆ

Share

ಸುಳ್ಯ: ನಿರೀಕ್ಷೆಯಂತೆ ಬಿ‌.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದೆ. ಗುರುವಾರ ಬೆಳಗ್ಗೆ 10 ಮಂದಿ ನೂತನ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದರೆ ನಿರಂತರ ಆರು ಭಾರಿ ಶಾಸಕರಾದ ಶಾಸಕ ಎಸ್.ಅಂಗಾರ ಸಚಿವರಾಗುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದ ಸುಳ್ಯ ಜನತೆಗೆ ಮತ್ತೊಮ್ಮೆ ನಿರಾಸೆ ಉಂಟಾಗಿದೆ.

ಕಾರಣ ನೂತನ ಸಚಿವರ ಪಟ್ಟಿಯಲ್ಲಿ ಶಾಸಕ ಅಂಗಾರ ಅವರ ಹೆಸರಿಲ್ಲ. ಮೊದಲ ಬಾರಿ ಸಚಿವ ಸಂಪುಟ ವಿಸ್ತರಣೆ ಆದಾಗ ಅಂಗಾರರಿಗೆ ಸಚಿವ ಸ್ಥಾನ ಖಚಿತ ಎಂದೇ ನಂಬಲಾಗಿತ್ತು. ಆದರೆ ಅಂಗಾರರಿಗೆ ಸಚಿವ ಸ್ಥಾನ ಒಲಿದು ಬರಲಿಲ್ಲ. ಇದರಿಂದ ಸುಳ್ಯದಲ್ಲಿ ಆಕ್ರೋಶ ಭುಗಿಲೆದ್ದು ಸುಳ್ಯ ಬಿಜೆಪಿ ಅಸಹಕಾರ ಚಳವಳಿ ಘೋಷಣೆ ಮಾಡಿತ್ತು. ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ನೇತೃತ್ವದಲ್ಲಿ ಸುಳ್ಯದ ಮುಖಂಡರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಅಂಗಾರರಿಗೆ ಸಚಿವ ಸ್ಥಾನ ನೀಡಬೇಕು ಎಂದು ಬೇಡಿಕೆ ಮುಂದಿರಿಸಿದ್ದರು.

ಮುಂದಿನ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಸಚಿವ ಸ್ಥಾನ ನೀಡುವುದಿದ್ದರೆ ಅಂಗಾರರಿಗೆ ಪ್ರಥಮ ಆದ್ಯತೆ ನೀಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಆಶ್ವಾಸನೆ ನೀಡಿದ್ದರು. ಆದರೆ ಗುರುವಾರ ಸಚಿವ ಸಂಪುಟ ವಿಸ್ತರಣೆ ಆದಾಗ ದಕ್ಷಿಣ ಕನ್ನಡ ಜಿಲ್ಲೆಗೂ ಮಂತ್ರಸ್ಥಾನವಿಲ್ಲ. ಅಂಗಾರರಿಗೂ ಸಚಿವ ಸ್ಥಾನ ಇಲ್ಲ ದೊರೆಯಲಿಲ್ಲ. ಆರು ಬಾರಿ ಶಾಸಕರಾದರೂ ಸರಳ ಸಜ್ಜನಿಕೆಯ ವ್ಯಕ್ತಿತ್ವದ ಅಂಗಾರ ಅವರನ್ನು ಕಡೆಗಣಿಸಿರುವುದಕ್ಕೆ ಸುಳ್ಯದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ‌.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

1 day ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

1 day ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago