ಸುಳ್ಯ: ಸುಳ್ಯ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಎಲ್ಲ ಜನಪ್ರತಿನಿಧಿಗಳ ಮತ್ತು ಗ್ರಾಮ ಪಂಚಾಯತ್ ಸಮಿತಿ ಅಧ್ಯಕ್ಷ -ಉಪಾಧ್ಯಕ್ಷರ ಮೇಲ್ಪಟ್ಟ ಶಕ್ತಿಕೇಂದ್ರ, ಮಹಾಶಕ್ತಿಕೇಂದ್ರ, ಮಂಡಲ ಮಟ್ಟದ,ಜಿಲ್ಲಾಮಟ್ಟದ, ವಿವಿಧ ಮೋರ್ಚಾಗಳ ಎಲ್ಲಾ ಪದಾಧಿಕಾರಿಗಳ ಹಾಗೂ ಹಿರಿಯ ಕಾರ್ಯಕರ್ತರ ಸಭೆಯನ್ನು ಆ.21 ರಂದು 10.30 ಕ್ಕೆ ಸುಳ್ಯ ಬಿಜೆಪಿ ಕಚೇರಿಯಲ್ಲಿ ಕರೆಯಲಾಗಿದೆ ಎಂದು ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ ತಿಳಿಸಿದ್ದಾರೆ.
ಸುಳ್ಯದ ಪ್ರಾಮಾಣಿಕ ದಕ್ಷ ಹಾಗೂ ಪಕ್ಷ ನಿಷ್ಠ, ಆರನೇ ಬಾರಿ ಸತತ ಗೆಲುವು ಸಾಧಿಸಿದ ಶಾಸಕ ಎಸ್.ಅಂಗಾರರಿಗೆ ಸಚಿವ ಸ್ಥಾನವು ಕೈ ತಪ್ಪಿರುವುದು ಪಕ್ಷ- ಸಂಘಟನೆಯ ವಿಚಾರ, ತತ್ವ, ಸಿದ್ಧಾಂತಗಳಿಗೆ ಬದ್ಧರಾಗಿ ದುಡಿದಂತಹ ಕಾರ್ಯಕರ್ತರಿಗೆ ಬಹಳಷ್ಟು ನೋವುಂಟಾಗಿದೆ. ಇನ್ನು ಮುಂದಿನ ನಮ್ಮ ತೀರ್ಮಾನಗಳ ಬಗ್ಗೆ ಆಲೋಚಿಸಲು ಸಭೆ ಕರೆಯಲಾಗಿದೆ. ಆದ್ದರಿಂದ ಎಲ್ಲರೂ ಆಗಮಿಸಿ ಸಲಹೆ ಸೂಚನೆಗಳನ್ನು ನೀಡಬೇಕಾಗಿ ವಿನಂತಿಸಿದ್ದಾರೆ.
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…