ಸುಳ್ಯ:ಅಜಾತಶತ್ರು, ಜನಪ್ರಿಯ ಶಾಸಕ ಎಸ್. ಅಂಗಾರರವರಿಗೆ ಮಂತ್ರಿ ಪದವಿ ನೀಡಿ ಸುಳ್ಯ ತಾಲೂಕಿನ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಸಹಕರಿಸಬೇಕೆಂದು ಸುಳ್ಯ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಕಳಂಜ ವಿಶ್ವನಾಥ ರೈ ಮುಖ್ಯ ಮಂತ್ರಿಗಳಿಗೆ ಮನವಿ ಮುಖಾಂತರ ಒತ್ತಾಯಿಸಿದ್ದಾರೆ.
ಸುಳ್ಯ ತಾಲೂಕು ರಾಜ್ಯದಲ್ಲಿ ಹೋಲಿಸಿದರೆ ಅಭಿವೃದ್ಧಿಯಾಗಲು ತುಂಬಾ ಹಿಂದುಳಿದಿದ್ದು ಅಂಗಾರವರಿಗೆ ಮಂತ್ರಿ ಪದವಿ ನೀಡಿ ಹೆಚ್ಚಿನ ಅನುದಾನ ನೀಡಿ ಅಭಿವೃದ್ಧಿಗೆ ಸಹಕರಿಸುವಂತೆ ಎಲ್ಲಾ ರಾಜಕೀಯ ಪಕ್ಷಗಳಲ್ಲೂ ಹಾಗೂ ತಾಲೂಕಿನ ಎಲ್ಲಾ ವರ್ಗಗಳ ಜನರಲ್ಲೂ ಪ್ರೀತಿಯನ್ನು ಗಳಿಸಿಕೊಂಡು ಸರಳ ಸಜ್ಜನಿಕೆ ಶಿಸ್ತಿನ ಅಜಾತಶತ್ರುವಾಗಿ ಎಲ್ಲರ ಪ್ರೀತಿಗೆ ಪಾತ್ರರಾದ ಮಾನ್ಯ ಎಸ್. ಅಂಗಾರರವರಿಗೆ ಕ್ಯಾಬಿನೆಟ್ ದರ್ಜೆಯ ಮಂತ್ರಿ ಪದವಿಯನ್ನು ನೀಡಿ ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ ಆಶೋತ್ತರಗಳನ್ನು ನೀಗಿಸಬೇಕೆಂದು ಕಳಕಳಿಯ ಮನವಿಯೊಂದಿಗೆ ಮುಖ್ಯ ಮಂತ್ರಿಯವರನ್ನು ಜಿಲ್ಲೆಯ ಎಲ್ಲಾ ಸಹಕರಿಗಳ ಹಾಗೂ ಕೃಷಿಕರ ಒಕ್ಕೊರಲಿನ ಅಭಿಪ್ರಾಯವೆಂದು ಪತ್ರದ ಮುಖಾಂತರ ಮನವರಿಕೆ ಮಾಡಲಾಗಿದೆ ಎಂದು ಕಳಂಜ ವಿಶ್ವನಾಥ ರೈತಿಳಿಸಿದ್ದಾರೆ.
ಈಗಿನಂತೆ ಮಾರ್ಚ್ 4 ಅಥವಾ 5 ರಿಂದ ಮೋಡದ ವಾತಾವರಣ ಹೆಚ್ಚಿರುವ ಸಾಧ್ಯತೆಗಳಿದ್ದು,…
ಅಭಿವೃದ್ಧಿ ಸವಾಲುಗಳ ನಡುವೆಯೂ ದೇಶದ ಎಲ್ಲ ತೈಲ ಉತ್ಪಾದನಾ ಕಂಪನಿಗಳು 2045ರ ವೇಳೆಗೆ…
ಕಾಫಿ ಸಂಶೋಧನೆ ಮತ್ತು ಅಭಿವೃದ್ಧಿ, ತಂತ್ರಜ್ಞಾನ ವಿಸ್ತರಣೆ, ಮಾರುಕಟ್ಟೆ ಅಭಿವೃದ್ಧಿಯಲ್ಲಿ ಕಾಫಿ ಮಂಡಳಿ…
ರೈತ ಉತ್ಪಾದಕ ಸಂಸ್ಥೆಗಳು ರೈತರು ಮತ್ತು ಇಲಾಖೆಯ ನಡುವೆ ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ…
ದಕ್ಷಿಣ ಕನ್ನಡದ ಸುಳ್ಯದಲ್ಲಿ 40.4 ಡಿಗ್ರಿ ಸೆಲ್ಸಿಯಸ್, ಉಪ್ಪಿನಂಗಡಿಯಲ್ಲಿ 39.6, ಪಾಣೆ ಮಂಗಳೂರಿನಲ್ಲಿ …
ಕೃಷಿಯಲ್ಲಿ ತೊಡಗಿರುವವರಲ್ಲಿ ಶೇಕಡಾ 80ರಷ್ಟು ಮಂದಿ ಸಣ್ಣ ರೈತರು. ಈ ಸಮುದಾಯ ಮಾರುಕಟ್ಟೆ…