ಸುಳ್ಯ:ಅಜಾತಶತ್ರು, ಜನಪ್ರಿಯ ಶಾಸಕ ಎಸ್. ಅಂಗಾರರವರಿಗೆ ಮಂತ್ರಿ ಪದವಿ ನೀಡಿ ಸುಳ್ಯ ತಾಲೂಕಿನ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಸಹಕರಿಸಬೇಕೆಂದು ಸುಳ್ಯ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಕಳಂಜ ವಿಶ್ವನಾಥ ರೈ ಮುಖ್ಯ ಮಂತ್ರಿಗಳಿಗೆ ಮನವಿ ಮುಖಾಂತರ ಒತ್ತಾಯಿಸಿದ್ದಾರೆ.
ಸುಳ್ಯ ತಾಲೂಕು ರಾಜ್ಯದಲ್ಲಿ ಹೋಲಿಸಿದರೆ ಅಭಿವೃದ್ಧಿಯಾಗಲು ತುಂಬಾ ಹಿಂದುಳಿದಿದ್ದು ಅಂಗಾರವರಿಗೆ ಮಂತ್ರಿ ಪದವಿ ನೀಡಿ ಹೆಚ್ಚಿನ ಅನುದಾನ ನೀಡಿ ಅಭಿವೃದ್ಧಿಗೆ ಸಹಕರಿಸುವಂತೆ ಎಲ್ಲಾ ರಾಜಕೀಯ ಪಕ್ಷಗಳಲ್ಲೂ ಹಾಗೂ ತಾಲೂಕಿನ ಎಲ್ಲಾ ವರ್ಗಗಳ ಜನರಲ್ಲೂ ಪ್ರೀತಿಯನ್ನು ಗಳಿಸಿಕೊಂಡು ಸರಳ ಸಜ್ಜನಿಕೆ ಶಿಸ್ತಿನ ಅಜಾತಶತ್ರುವಾಗಿ ಎಲ್ಲರ ಪ್ರೀತಿಗೆ ಪಾತ್ರರಾದ ಮಾನ್ಯ ಎಸ್. ಅಂಗಾರರವರಿಗೆ ಕ್ಯಾಬಿನೆಟ್ ದರ್ಜೆಯ ಮಂತ್ರಿ ಪದವಿಯನ್ನು ನೀಡಿ ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ ಆಶೋತ್ತರಗಳನ್ನು ನೀಗಿಸಬೇಕೆಂದು ಕಳಕಳಿಯ ಮನವಿಯೊಂದಿಗೆ ಮುಖ್ಯ ಮಂತ್ರಿಯವರನ್ನು ಜಿಲ್ಲೆಯ ಎಲ್ಲಾ ಸಹಕರಿಗಳ ಹಾಗೂ ಕೃಷಿಕರ ಒಕ್ಕೊರಲಿನ ಅಭಿಪ್ರಾಯವೆಂದು ಪತ್ರದ ಮುಖಾಂತರ ಮನವರಿಕೆ ಮಾಡಲಾಗಿದೆ ಎಂದು ಕಳಂಜ ವಿಶ್ವನಾಥ ರೈತಿಳಿಸಿದ್ದಾರೆ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…