ಮಂಗಳೂರು: ಇತ್ತೀಚಿನ ದಿನಗಳಲ್ಲಿ ಮೊಬೈಲ್, ವಾಚ್ ಇತ್ಯಾದಿಗಳನ್ನು ಕಳುಹಿಸುವ ಬಗ್ಗೆ ಫೋನ್ ನಲ್ಲಿ ಕರೆ ಅಥವಾ ಎಸ್.ಎಂ.ಎಸ್. ಮೂಲಕ ಸಂದೇಶ ಬಂದಿದೆ ಎಂಬ ಕಾರಣಕ್ಕೆ ಅನೇಕ ಸಾರ್ವಜನಿಕರು ಕೆಲವು ಖಾಸಗಿ ಕಂಪನಿಗಳಿಂದ ಪಾರ್ಸಲ್ಗಳನ್ನು ವ್ಯಾಲ್ಯೂ ಪೇಯೇಬಲ್ ಪೋಸ್ಟ್ ಅಥವಾ ಬಟಾವಡೆಯ ಸಂದರ್ಭದಲ್ಲಿ ಪಾವತಿಸುವ ವಿಧಾನದ ಮೂಲಕ ತರಿಸಿಕೊಳ್ಳುತ್ತಿದ್ದಾರೆ.
ಆ ಪಾರ್ಸಲ್ನಲ್ಲಿ ಮೊಬೈಲ್, ವಾಚ್ ಇತ್ಯಾದಿಗಳ ಬದಲಿಗೆ ಲಕ್ಷ್ಮೀ ಯಂತ್ರ, ಲೋಹದ ಚೂರುಗಳು, ಬಟ್ಟೆ ಇತ್ಯಾದಿಗಳು ಮಾತ್ರ ಇವೆ ಎಂದು ಅಂಚೆ ಕಚೇರಿಗೆ ದೂರು ನೀಡುತ್ತಿದ್ದು, ಸಾರ್ವಜನಿಕರು ಅಂಥಹ ಕಂಪನಿಗಳಿಂದ ವಸ್ತುಗಳನ್ನು ತರಿಸಿಕೊಳ್ಳುವಾಗ ಸಂಸ್ಥೆಯ ವಿಶ್ವಾಸಾರ್ಹತೆಯನ್ನು ತಾವೇ ಧೃಢಪಡಿಸಿಕೊಳ್ಳಬೇಕಾಗಿದೆ.
ಅಂಚೆ ಇಲಾಖೆಯು ಈ ನಿಟ್ಟಿನಲ್ಲಿ ಉಂಟಾದ ನಷ್ಟಗಳನ್ನು ತಂಬಿಸಿಕೊಡಲು ಯಾವುದೇ ರೀತಿಯಲ್ಲಿಯೂ ನಿಯಮಾವಳಿಗಳಲ್ಲಿ ಅವಕಾಶ ಇಲ್ಲವೆಂದು ಸಾರ್ವಜನಿಕರು ಗಮನಿಸಬೇಕು ಎಂದು ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…