ಮಂಗಳೂರು: ಇತ್ತೀಚಿನ ದಿನಗಳಲ್ಲಿ ಮೊಬೈಲ್, ವಾಚ್ ಇತ್ಯಾದಿಗಳನ್ನು ಕಳುಹಿಸುವ ಬಗ್ಗೆ ಫೋನ್ ನಲ್ಲಿ ಕರೆ ಅಥವಾ ಎಸ್.ಎಂ.ಎಸ್. ಮೂಲಕ ಸಂದೇಶ ಬಂದಿದೆ ಎಂಬ ಕಾರಣಕ್ಕೆ ಅನೇಕ ಸಾರ್ವಜನಿಕರು ಕೆಲವು ಖಾಸಗಿ ಕಂಪನಿಗಳಿಂದ ಪಾರ್ಸಲ್ಗಳನ್ನು ವ್ಯಾಲ್ಯೂ ಪೇಯೇಬಲ್ ಪೋಸ್ಟ್ ಅಥವಾ ಬಟಾವಡೆಯ ಸಂದರ್ಭದಲ್ಲಿ ಪಾವತಿಸುವ ವಿಧಾನದ ಮೂಲಕ ತರಿಸಿಕೊಳ್ಳುತ್ತಿದ್ದಾರೆ.
ಆ ಪಾರ್ಸಲ್ನಲ್ಲಿ ಮೊಬೈಲ್, ವಾಚ್ ಇತ್ಯಾದಿಗಳ ಬದಲಿಗೆ ಲಕ್ಷ್ಮೀ ಯಂತ್ರ, ಲೋಹದ ಚೂರುಗಳು, ಬಟ್ಟೆ ಇತ್ಯಾದಿಗಳು ಮಾತ್ರ ಇವೆ ಎಂದು ಅಂಚೆ ಕಚೇರಿಗೆ ದೂರು ನೀಡುತ್ತಿದ್ದು, ಸಾರ್ವಜನಿಕರು ಅಂಥಹ ಕಂಪನಿಗಳಿಂದ ವಸ್ತುಗಳನ್ನು ತರಿಸಿಕೊಳ್ಳುವಾಗ ಸಂಸ್ಥೆಯ ವಿಶ್ವಾಸಾರ್ಹತೆಯನ್ನು ತಾವೇ ಧೃಢಪಡಿಸಿಕೊಳ್ಳಬೇಕಾಗಿದೆ.
ಅಂಚೆ ಇಲಾಖೆಯು ಈ ನಿಟ್ಟಿನಲ್ಲಿ ಉಂಟಾದ ನಷ್ಟಗಳನ್ನು ತಂಬಿಸಿಕೊಡಲು ಯಾವುದೇ ರೀತಿಯಲ್ಲಿಯೂ ನಿಯಮಾವಳಿಗಳಲ್ಲಿ ಅವಕಾಶ ಇಲ್ಲವೆಂದು ಸಾರ್ವಜನಿಕರು ಗಮನಿಸಬೇಕು ಎಂದು ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…