ಮಂಗಳೂರು: ಇತ್ತೀಚಿನ ದಿನಗಳಲ್ಲಿ ಮೊಬೈಲ್, ವಾಚ್ ಇತ್ಯಾದಿಗಳನ್ನು ಕಳುಹಿಸುವ ಬಗ್ಗೆ ಫೋನ್ ನಲ್ಲಿ ಕರೆ ಅಥವಾ ಎಸ್.ಎಂ.ಎಸ್. ಮೂಲಕ ಸಂದೇಶ ಬಂದಿದೆ ಎಂಬ ಕಾರಣಕ್ಕೆ ಅನೇಕ ಸಾರ್ವಜನಿಕರು ಕೆಲವು ಖಾಸಗಿ ಕಂಪನಿಗಳಿಂದ ಪಾರ್ಸಲ್ಗಳನ್ನು ವ್ಯಾಲ್ಯೂ ಪೇಯೇಬಲ್ ಪೋಸ್ಟ್ ಅಥವಾ ಬಟಾವಡೆಯ ಸಂದರ್ಭದಲ್ಲಿ ಪಾವತಿಸುವ ವಿಧಾನದ ಮೂಲಕ ತರಿಸಿಕೊಳ್ಳುತ್ತಿದ್ದಾರೆ.
ಆ ಪಾರ್ಸಲ್ನಲ್ಲಿ ಮೊಬೈಲ್, ವಾಚ್ ಇತ್ಯಾದಿಗಳ ಬದಲಿಗೆ ಲಕ್ಷ್ಮೀ ಯಂತ್ರ, ಲೋಹದ ಚೂರುಗಳು, ಬಟ್ಟೆ ಇತ್ಯಾದಿಗಳು ಮಾತ್ರ ಇವೆ ಎಂದು ಅಂಚೆ ಕಚೇರಿಗೆ ದೂರು ನೀಡುತ್ತಿದ್ದು, ಸಾರ್ವಜನಿಕರು ಅಂಥಹ ಕಂಪನಿಗಳಿಂದ ವಸ್ತುಗಳನ್ನು ತರಿಸಿಕೊಳ್ಳುವಾಗ ಸಂಸ್ಥೆಯ ವಿಶ್ವಾಸಾರ್ಹತೆಯನ್ನು ತಾವೇ ಧೃಢಪಡಿಸಿಕೊಳ್ಳಬೇಕಾಗಿದೆ.
ಅಂಚೆ ಇಲಾಖೆಯು ಈ ನಿಟ್ಟಿನಲ್ಲಿ ಉಂಟಾದ ನಷ್ಟಗಳನ್ನು ತಂಬಿಸಿಕೊಡಲು ಯಾವುದೇ ರೀತಿಯಲ್ಲಿಯೂ ನಿಯಮಾವಳಿಗಳಲ್ಲಿ ಅವಕಾಶ ಇಲ್ಲವೆಂದು ಸಾರ್ವಜನಿಕರು ಗಮನಿಸಬೇಕು ಎಂದು ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…