ಮಂಗಳೂರು: ಇತ್ತೀಚಿನ ದಿನಗಳಲ್ಲಿ ಮೊಬೈಲ್, ವಾಚ್ ಇತ್ಯಾದಿಗಳನ್ನು ಕಳುಹಿಸುವ ಬಗ್ಗೆ ಫೋನ್ ನಲ್ಲಿ ಕರೆ ಅಥವಾ ಎಸ್.ಎಂ.ಎಸ್. ಮೂಲಕ ಸಂದೇಶ ಬಂದಿದೆ ಎಂಬ ಕಾರಣಕ್ಕೆ ಅನೇಕ ಸಾರ್ವಜನಿಕರು ಕೆಲವು ಖಾಸಗಿ ಕಂಪನಿಗಳಿಂದ ಪಾರ್ಸಲ್ಗಳನ್ನು ವ್ಯಾಲ್ಯೂ ಪೇಯೇಬಲ್ ಪೋಸ್ಟ್ ಅಥವಾ ಬಟಾವಡೆಯ ಸಂದರ್ಭದಲ್ಲಿ ಪಾವತಿಸುವ ವಿಧಾನದ ಮೂಲಕ ತರಿಸಿಕೊಳ್ಳುತ್ತಿದ್ದಾರೆ.
ಆ ಪಾರ್ಸಲ್ನಲ್ಲಿ ಮೊಬೈಲ್, ವಾಚ್ ಇತ್ಯಾದಿಗಳ ಬದಲಿಗೆ ಲಕ್ಷ್ಮೀ ಯಂತ್ರ, ಲೋಹದ ಚೂರುಗಳು, ಬಟ್ಟೆ ಇತ್ಯಾದಿಗಳು ಮಾತ್ರ ಇವೆ ಎಂದು ಅಂಚೆ ಕಚೇರಿಗೆ ದೂರು ನೀಡುತ್ತಿದ್ದು, ಸಾರ್ವಜನಿಕರು ಅಂಥಹ ಕಂಪನಿಗಳಿಂದ ವಸ್ತುಗಳನ್ನು ತರಿಸಿಕೊಳ್ಳುವಾಗ ಸಂಸ್ಥೆಯ ವಿಶ್ವಾಸಾರ್ಹತೆಯನ್ನು ತಾವೇ ಧೃಢಪಡಿಸಿಕೊಳ್ಳಬೇಕಾಗಿದೆ.
ಅಂಚೆ ಇಲಾಖೆಯು ಈ ನಿಟ್ಟಿನಲ್ಲಿ ಉಂಟಾದ ನಷ್ಟಗಳನ್ನು ತಂಬಿಸಿಕೊಡಲು ಯಾವುದೇ ರೀತಿಯಲ್ಲಿಯೂ ನಿಯಮಾವಳಿಗಳಲ್ಲಿ ಅವಕಾಶ ಇಲ್ಲವೆಂದು ಸಾರ್ವಜನಿಕರು ಗಮನಿಸಬೇಕು ಎಂದು ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…