ಮಂಗಳೂರು: ಇತ್ತೀಚಿನ ದಿನಗಳಲ್ಲಿ ಮೊಬೈಲ್, ವಾಚ್ ಇತ್ಯಾದಿಗಳನ್ನು ಕಳುಹಿಸುವ ಬಗ್ಗೆ ಫೋನ್ ನಲ್ಲಿ ಕರೆ ಅಥವಾ ಎಸ್.ಎಂ.ಎಸ್. ಮೂಲಕ ಸಂದೇಶ ಬಂದಿದೆ ಎಂಬ ಕಾರಣಕ್ಕೆ ಅನೇಕ ಸಾರ್ವಜನಿಕರು ಕೆಲವು ಖಾಸಗಿ ಕಂಪನಿಗಳಿಂದ ಪಾರ್ಸಲ್ಗಳನ್ನು ವ್ಯಾಲ್ಯೂ ಪೇಯೇಬಲ್ ಪೋಸ್ಟ್ ಅಥವಾ ಬಟಾವಡೆಯ ಸಂದರ್ಭದಲ್ಲಿ ಪಾವತಿಸುವ ವಿಧಾನದ ಮೂಲಕ ತರಿಸಿಕೊಳ್ಳುತ್ತಿದ್ದಾರೆ.
ಆ ಪಾರ್ಸಲ್ನಲ್ಲಿ ಮೊಬೈಲ್, ವಾಚ್ ಇತ್ಯಾದಿಗಳ ಬದಲಿಗೆ ಲಕ್ಷ್ಮೀ ಯಂತ್ರ, ಲೋಹದ ಚೂರುಗಳು, ಬಟ್ಟೆ ಇತ್ಯಾದಿಗಳು ಮಾತ್ರ ಇವೆ ಎಂದು ಅಂಚೆ ಕಚೇರಿಗೆ ದೂರು ನೀಡುತ್ತಿದ್ದು, ಸಾರ್ವಜನಿಕರು ಅಂಥಹ ಕಂಪನಿಗಳಿಂದ ವಸ್ತುಗಳನ್ನು ತರಿಸಿಕೊಳ್ಳುವಾಗ ಸಂಸ್ಥೆಯ ವಿಶ್ವಾಸಾರ್ಹತೆಯನ್ನು ತಾವೇ ಧೃಢಪಡಿಸಿಕೊಳ್ಳಬೇಕಾಗಿದೆ.
ಅಂಚೆ ಇಲಾಖೆಯು ಈ ನಿಟ್ಟಿನಲ್ಲಿ ಉಂಟಾದ ನಷ್ಟಗಳನ್ನು ತಂಬಿಸಿಕೊಡಲು ಯಾವುದೇ ರೀತಿಯಲ್ಲಿಯೂ ನಿಯಮಾವಳಿಗಳಲ್ಲಿ ಅವಕಾಶ ಇಲ್ಲವೆಂದು ಸಾರ್ವಜನಿಕರು ಗಮನಿಸಬೇಕು ಎಂದು ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…