ಮಂಗಳೂರು: ಇತ್ತೀಚಿನ ದಿನಗಳಲ್ಲಿ ಮೊಬೈಲ್, ವಾಚ್ ಇತ್ಯಾದಿಗಳನ್ನು ಕಳುಹಿಸುವ ಬಗ್ಗೆ ಫೋನ್ ನಲ್ಲಿ ಕರೆ ಅಥವಾ ಎಸ್.ಎಂ.ಎಸ್. ಮೂಲಕ ಸಂದೇಶ ಬಂದಿದೆ ಎಂಬ ಕಾರಣಕ್ಕೆ ಅನೇಕ ಸಾರ್ವಜನಿಕರು ಕೆಲವು ಖಾಸಗಿ ಕಂಪನಿಗಳಿಂದ ಪಾರ್ಸಲ್ಗಳನ್ನು ವ್ಯಾಲ್ಯೂ ಪೇಯೇಬಲ್ ಪೋಸ್ಟ್ ಅಥವಾ ಬಟಾವಡೆಯ ಸಂದರ್ಭದಲ್ಲಿ ಪಾವತಿಸುವ ವಿಧಾನದ ಮೂಲಕ ತರಿಸಿಕೊಳ್ಳುತ್ತಿದ್ದಾರೆ.
ಆ ಪಾರ್ಸಲ್ನಲ್ಲಿ ಮೊಬೈಲ್, ವಾಚ್ ಇತ್ಯಾದಿಗಳ ಬದಲಿಗೆ ಲಕ್ಷ್ಮೀ ಯಂತ್ರ, ಲೋಹದ ಚೂರುಗಳು, ಬಟ್ಟೆ ಇತ್ಯಾದಿಗಳು ಮಾತ್ರ ಇವೆ ಎಂದು ಅಂಚೆ ಕಚೇರಿಗೆ ದೂರು ನೀಡುತ್ತಿದ್ದು, ಸಾರ್ವಜನಿಕರು ಅಂಥಹ ಕಂಪನಿಗಳಿಂದ ವಸ್ತುಗಳನ್ನು ತರಿಸಿಕೊಳ್ಳುವಾಗ ಸಂಸ್ಥೆಯ ವಿಶ್ವಾಸಾರ್ಹತೆಯನ್ನು ತಾವೇ ಧೃಢಪಡಿಸಿಕೊಳ್ಳಬೇಕಾಗಿದೆ.
ಅಂಚೆ ಇಲಾಖೆಯು ಈ ನಿಟ್ಟಿನಲ್ಲಿ ಉಂಟಾದ ನಷ್ಟಗಳನ್ನು ತಂಬಿಸಿಕೊಡಲು ಯಾವುದೇ ರೀತಿಯಲ್ಲಿಯೂ ನಿಯಮಾವಳಿಗಳಲ್ಲಿ ಅವಕಾಶ ಇಲ್ಲವೆಂದು ಸಾರ್ವಜನಿಕರು ಗಮನಿಸಬೇಕು ಎಂದು ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…